Webdunia - Bharat's app for daily news and videos

Install App

`ಕೈ’ ತೊರೆದು ಕಮಲ ಹಿಡಿಯಲಿದ್ದಾರೆ ನೆ.ಲ.ನರೇಂದ್ರ ಬಾಬು

Webdunia
ಬುಧವಾರ, 20 ಸೆಪ್ಟಂಬರ್ 2017 (13:52 IST)
ಬೆಂಗಳೂರು: ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಕಾಂಗ್ರೆಸ್ ನಲ್ಲಿ ಇತ್ತೀಚೆಗಿನ ಬೆಳವಣಿಗೆಗಳಿಂದ ಬೇಸತ್ತಿರುವ ನರೇಂದ್ರಬಾಬು ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಇಂದು ಸಂಜೆ ರಾಜಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಕಾರ್ಯಕರ್ತರೊಂದಿಗೆ ಅನೌಪಚಾರಿಕ ಸಭೆ ನಡೆಸಿ, ತಮ್ಮ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಂತರ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

10 ಕಾರಣಗಳನ್ನು ನೀಡಿ ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಪಕ್ಷದಲ್ಲಿ ಒಳ ಒಪ್ಪಂದ ಹೆಚ್ಚುತ್ತಿದೆ. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಪಕ್ಷ ಜೆಡಿಎಸ್ ಜತೆ ಒಳ ಒಪ್ಪಂದ ಮಾಡಿಕೊಂಡು ಹೆಚ್ಚೆಚ್ಚು ಅನುದಾನ ನೀಡುತ್ತಿದೆ. ತಾವು ಶಾಸಕರಾಗಿದ್ದ ಸಮಯದಲ್ಲಿ  ಯಾವುದೇ ಅನುದಾನ ನೀಡಿರಲಿಲ್ಲ. ಹೀಗೆ ಅನುದಾನ ನೀಡಿದ್ದರೆ, ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಿದ್ದೆ. ಇದಕ್ಕಿಂತ ಮೇಲಾಗಿ ಬಿಬಿಎಂಪಿಯಲ್ಲಿ ಸೋತ ವ್ಯಕ್ತಿಗೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡಿದ್ದಾರೆ. ಈ ಮೂಲಕ ಪಕ್ಷದಲ್ಲಿ ತುಳಿಯಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆ ದೂರು ನೀಡಿದರು ಕ್ರಮಕೈಗೊಂಡಿಲ್ಲ. ಹೀಗಾಗಿ  ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಅಕ್ಟೋಬರ್ 1ರಂದು ನೆ.ಲ.ನರೇಂದ್ರ ಬಾಬು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments