Webdunia - Bharat's app for daily news and videos

Install App

ಕರೆಂಟ್ ಬಿಲ್, ಮನೆ ಖರ್ಚಿಗೂ ನಾಗೇಂದ್ರ ವಾಲ್ಮೀಕಿ ನಿಗಮದ ದುಡ್ಡು ಬಳಸಿದ್ದರು: ಆರ್ ಅಶೋಕ್

Krishnaveni K
ಬುಧವಾರ, 16 ಅಕ್ಟೋಬರ್ 2024 (15:08 IST)
ಬೆಂಗಳೂರು: ವಾಲ್ಮೀಕಿ ಹಗರಣದ ಆರೋಪಿಯಾಗಿರುವ ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದರೆ ಇತ್ತ ಅವರ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಪ್ರಕರಣದಲ್ಲಿ ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದು ಬಿಜೆಪಿ ಪ್ರತಿಪಾದಿಸುತ್ತಲೇ ಇದೆ. ಇದರ ಅವರ ವಿರುದ್ಧ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಮೀನು ಪಡೆದು ಹೊರಬಂದರು. ಇದರ ಬೆನ್ನಲ್ಲೇ ನನ್ನ ವಿರುದ್ಧ ಬಿಜೆಪಿ ಷಡ್ಯಂತ್ರ ಮಾಡಿ ಇಲ್ಲದ ಆರೋಪ ಹೊರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದರೆ ಈ ನಡುವೆ ನಾಗೇಂದ್ರ ತಮ್ಮ ಮನೆ ಖರ್ಚಿಗೂ ವಾಲ್ಮೀಕಿ ನಿಗಮದ ದುಡ್ಡು ಬಳಸುತ್ತಿದ್ದರು ಎಂಬುದಕ್ಕೆ ನಮ್ಮ ಬಳಿ ಸಾಕ್ಷಿಗಳೇ ಇವೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ. ನಿಗಮದ ಹಣವನ್ನು ನಾಗೇಂದ್ರ ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ಮನೆಯ ಕೆಲಸದವರಿಗೆ ಸಂಬಳ ಕೊಡಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ವಾಹನಗಳಿಗೆ ಡೀಸೆಲ್ ತುಂಬಿಸಲು ಬಳಸುತ್ತಿದ್ದರು ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯಗಳೇ ಇವೆ ಎಂದಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದವರಿಗೆ ಮಿಸಲಾಗಿದ್ದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಾಚಾರ ನಡೆದಿರುವಾಗಲೂ ‘ಆತ್ಮಸಾಕ್ಷಿ’ ಇರುವ ಸಿಎಂ ತಮ್ಮ ಸ್ಥಾನದಲ್ಲಿ ಮುಂದುವರಿಯಲ್ಲ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು ಎಂಬವರು ಈಗ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದಾರೆ ಎನ್ನವುದು ಕನ್ನಡಿಗರ ದುಸ್ಥಿತಿ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments