Webdunia - Bharat's app for daily news and videos

Install App

ಮತ್ತೊಮ್ಮೆ ದೇಶ ವಿಭಜನೆ ಮಾತನಾಡಿದ ಡಿಕೆ ಸುರೇಶ್

Krishnaveni K
ಸೋಮವಾರ, 29 ಜುಲೈ 2024 (16:30 IST)
ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಮಾಜಿ ಸಂಸದ ಡಿಕೆ ಸುರೇಶ್ ಮತ್ತೊಮ್ಮೆ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ.

ಈ ಹಿಂದೆ ಸಂಸದರಾಗಿದ್ದಾಗ ಡಿಕೆ ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿ ವಿವಾದಕ್ಕೀಡಾಗಿದ್ದರು. ಇದೀಗ ಮತ್ತೊಮ್ಮೆ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಏನೂ ಕೊಡುಗೆ ನೀಡಿಲ್ಲ. ಹೀಗಾಗಿ ದೇಶ ವಿಭಜನೆ ಕೂಗು ಆರಂಭವಾಗಬಹುದು ಎನ್ನುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

ಬಜೆಟ್ ನಲ್ಲಿ ಕೇವಲ ಉತ್ತರ ಭಾರತ, ಗುಜರಾತ್ ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮ್ಮ ರಾಜ್ಯಕ್ಕೆ ಏನೂ ಅರ್ಹತೆಯಿಲ್ವಾ? ರಾಜ್ಯಕ್ಕೆ ಯೋಗ್ಯವಾದ ಆರ್ಥಿಕ ಯೋಜನೆ ನೀಡುವುದು ಕೇಂದ್ರದ ಕರ್ತವ್ಯವಾಗಿದೆ. ಆದರೆ ನಮ್ಮ ರಾಜ್ಯಕ್ಕೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಭಿಕ್ಷೆ ಕೇಳುತ್ತಿಲ್ಲ. ದಕ್ಷಿಣ ಭಾರತಕ್ಕೆ ಯಾವತ್ತೂ ಅನ್ಯಾಯವಾಗುತ್ತಿದೆ. ಬಜೆಟ್ ನಲ್ಲಿ ದಕ್ಷಿಣಕ್ಕೆ ಏನು ಯೋಜನೆ ಕೊಟ್ಟಿದ್ದೀರಿ? ವೋಟ್ ಕೇಳಿದ್ದು ಬಿಟ್ಟರೆ ಬೇರೆ ಏನೂ ಕೊಡುಗೆ ಇಲ್ಲ. ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಎಂದು ನಾನು ಮೊದಲೇ ಹೇಳಿದ್ದೆ. ಇದೇ ರೀತಿ ಅನ್ಯಾಯ ಮುಂದುವರಿದರೆ ದೇಶ ವಿಭಜನೆ ಕೂಗು ಹೇಳಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments