Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಗುಡ್‌ಬೈ

Webdunia
ಮಂಗಳವಾರ, 20 ಜೂನ್ 2017 (13:11 IST)
ಕೊನೆಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ.
 
ಇಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಬೆಂಬಲಿಗರು, ಹಿತೈಷಿಗಳ ಸಭೆಯಲ್ಲಿ ಎಚ್.ವಿಶ್ವನಾಥ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸಿದ್ದರಾಮಯ್ಯರಿರುವ ಕಾಂಗ್ರೆಸ್ ಪಕ್ಷದಲ್ಲಿ ನಾನಿರುವುದಿಲ್ಲ ಎಂದು ಗುಡುಗಿದರು.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ದ್ವೇಷವಿಲ್ಲ. ಅಧಿಕಾರದಲ್ಲಿರುವವರು ಕಾಂಗ್ರೆಸ್‌ ಪಕ್ಷವನ್ನು ವಿನಾಶದ ಅಂಚಿಗೆ ತಳ್ಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯಿಂದ ಬೇಸತ್ತಿರುವ ಅವರು, ಕುರುಬ ಸಮುದಾಯದವರಿಗೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ. ನಿಮ್ಮ ಸಮುದಾಯವನ್ನು ನೀವೇ ತುಳಿಯುತ್ತಿದ್ದೀರಿ. ನೀವು ಇಂತಹ ಸಣ್ಣ ಮನಸ್ಸಿನವರು ಎಂದು ಗೊತ್ತಿರಲಿಲ್ಲ. ಗೊತ್ತಿದ್ದರೆ ನಿಮ್ಮನ್ನು ಕಾಂಗ್ರೆಸ್ ಪಕ್ಷದೊಳಗೆ ಬಿಟ್ಟುಕೊಳ್ಳುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೆಲ ದಿನಗಳ ಹಿಂದೆ, ಶೀಘ್ರಧಲ್ಲಿಯೇ ಎಚ್,ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿರುವುದನ್ನು ಸ್ಮರಿಸಬಹುದು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan ಗೊತ್ತು ಗುರಿಯಿಲ್ಲದ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Karnataka Weather: ಮುಂಗಾರು ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

ಮುಂದಿನ ಸುದ್ದಿ
Show comments