Select Your Language

Notifications

webdunia
webdunia
webdunia
webdunia

"ಕೈ" ಬಿಟ್ಟು "ಕಮಲ" ಪಕ್ಷ ಸೇರಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು , ಬುಧವಾರ, 8 ಮಾರ್ಚ್ 2017 (18:28 IST)
ಮಾಜಿ ಸಂಸದ ಹಿರಿಯ ಕಾಂಗ್ರೆಸ್ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಕೈ ಬಿಟ್ಟು ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
 
ಕಾಂಗ್ರೆಸ್ ಪಕ್ಷ ಒಂದುವರೆ ವರ್ಷದಿಂದ ಪಕ್ಷದಿಂದ ಉಚ್ಚಾಟಿಸಿತ್ತು. ಆದ್ದರಿಂದ ಬೇರೆ ದಾರಿ ಕಾಣದೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.
 
ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿರುವ ಜಯಪ್ರಕಾಶ್ ಹೆಗ್ಡೆ, ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ವರ್ತನೆಯಿಂದಾಗಿ ಬೇಸರಗೊಂಡಿದ್ದರು ಎನ್ನಲಾಗಿದೆ.
 
ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗಿದ್ದೇನೆ. ಅದರಂತೆ, ಬಿಜೆಪಿಯಲ್ಲೂ ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗಲು ಬಯಸುತ್ತೇನೆ ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಚಿತ ಅಡುಗೆ ಅನಿಲ ಸಂಪರ್ಕಕ್ಕೆ ಆಧಾರ್ ಕಡ್ಡಾಯ