Webdunia - Bharat's app for daily news and videos

Install App

ರಮೇಶ್ ಕುಮಾರ್ ವಿರುದ್ಧ ಅರಣ್ಯ ಇಲಾಖೆಗೆ ಸೇರಿದ 64 ಎಕರೆ ಗುಳುಂ ಮಾಡಿದ ಆರೋಪ

Krishnaveni K
ಬುಧವಾರ, 30 ಅಕ್ಟೋಬರ್ 2024 (15:00 IST)
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ ವಿರುದ್ಧ 64 ಎಕರೆ ಅರಣ್ಯ ಭೂಮಿ ಗುಳುಂ ಮಾಡಿದ ಆರೋಪ ಎದುರಾಗಿದೆ. ರಮೇಶ್ ಕುಮಾರ್ ಸೇರಿದಂತೆ ಏಳು ಮಂದಿ ಈ ಭೂಹಗರಣದಲ್ಲಿ ಪಾಲುದಾರರು ಎಂದು ಆರೋಪ ಕೇಳಿಬಂದಿದೆ.

ಕೋಲಾರ ಜಿಲ್ಲೆಯ ಹೊಸುಹುಡ್ಯ ಸರ್ವೆ ನಂ.1, 2 ರಲ್ಲಿರುವ 122 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಏಳು ಮಂದಿಯ ಪೈಕಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡಾ ಒಬ್ಬರು. ಈ ಮೂಲಕ ರಮೇಶ್ ಕುಮಾರ್ ಗೆ ಸಂಕಷ್ಟ ಎದುರಾಗಿದೆ.

ಈಗಾಗಲೇ ಸರ್ಕಾರ ಮುಡಾ ಹಗರಣ, ವಕ್ಫ್ ಭೂಮಿ ನೋಟಿಸ್ ಸೇರಿದಂತೆ ಹಲವು ವಿವಾದದಲ್ಲಿ ಮುಳುಗಿದೆ. ಅದರ ನಡುವೆ ಈಗ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ವಿರುದ್ಧ ಅಕ್ರಮವಾಗಿ ಭೂ ಒತ್ತುವರಿ ಆರೋಪ ಬಂದಿದೆ. ಇದು ರಾಜ್ಯ ಕಾಂಗ್ರೆಸ್ ಗೆ ಮತ್ತೊಂದು ಮುಜುಗರ ತಂದಿಟ್ಟಿದೆ.

ಡಿಕೆ ರವಿ ಡಿಸಿ ಆಗಿದ್ದಾಗ ಜಂಟಿ ಸರ್ವೆ ಮಾಡಲಾಗಿತ್ತು. ಆದರೆ ಇದರಲ್ಲಿ ಗೊಂದಲಗಳಿದ್ದ ಕಾರಣ ಮರು ಸರ್ವೆ ಮಾಡಲು ಕೇಂದ್ರ ಸರ್ಕಾರ ಆದೇಶ ನೀಡಿತ್ತು. ಜೊತೆಗೆ ರಮೇಶ್ ಕುಮಾರ್ ಗೂ ಹಾಜರಿರಲು ಸೂಚಿಸಿತ್ತು.122 ಎಕರೆ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದ ಕಾರಣ ಇದುವರೆಗೆ ಕ್ರಮ ಜರುಗಿಸಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments