ಪರೀಕ್ಷೆ ವಿನಾಯ್ತಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

Webdunia
ಶನಿವಾರ, 3 ಜುಲೈ 2021 (18:40 IST)
ಬೆಂಗಳೂರು: ಪರೀಕ್ಷೆ ವಿನಾಯ್ತಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಫಿಕ್ಸ್ ಆಗುವುದು ಬಹುತೇಕ ಖಚಿತವಾಗಿದೆ. ಪರೀಕ್ಷೆ ಕ್ಯಾನ್ಸಲ್ ಮಾಡಲು‌ ಸಾಧ್ಯವೇ ಇಲ್ಲ
ಸೆಮಿಸ್ಟರ್ ಪರೀಕ್ಷೆಗಳನ್ನ ಕೈಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ. ಎರಡೂ ಪರೀಕ್ಷೆಗಳ ನಡೆಸುತ್ತೇವೆ, ಪರೀಕ್ಷೆಗೆ ಹೆಚ್ಚು ದಿನಗಳ ಅಂತರವಿರುತ್ತೆ. 30 ರಿಂದ 45 ದಿನಗಳ ನಂತರ ಪರೀಕ್ಷೆ ನಡೆಸುತ್ತೇವೆ ಎಂದು ಪರೀಕ್ಷೆಗೆ ಬೇಕಾದ ತಯಾರಿಗಳನ್ನ ವಿಶ್ವವಿದ್ಯಾಲಯಗಳು ಮಾಡಿಕೊಳ್ಳುತ್ತಿವೆ.
 
ಬೆಂಗಳೂರು ‌ಸೆಂಟ್ರಲ್ ವಿವಿ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ವಿವಿಗಳು ಪರೀಕ್ಷೆಗೆ ಸಿದ್ದತೆ ನೆಡೆಸುತ್ತಿವೆ.
ಜುಲೈ 7ರೊಳಗೆ ವ್ಯಾಕ್ಸಿನ್ ಕ್ಯಾಂಪೇನ್ ಮುಗಿಸುವಂತೆ ಡಿಸಿಎಂ ಸೂಚನೆ ಈಗಾಗಲೇ ನೀಡಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ಅಶ್ವಥ ನಾರಾಯಣ್ ಸ್ಪಷ್ಟ ನಿರ್ದೇಶನ ಕೊಟ್ಟಿದ್ದಾರೆ. ಜುಲೈ ಎರಡನೇ ವಾರದಲ್ಲಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಕ್ಕೆ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಬಂದಿದೆ.
 
ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿರುವ ವಿವಿಗಳು, ಸರ್ಕಾರದ ಗ್ರೀನ್ ಸಿಗ್ನಲ್ ಕೊಟ್ರೆ ಜುಲೈ ಕೊನೆ ವಾರದಲ್ಲಿ ಪರೀಕ್ಷೆ ಫಿಕ್ಸ್ ಮಾಡಲಿವೆ. ಲಸಿಕಾ ಅಭಿಯಾನ ಪೂರ್ಣಗೊಂಡ ಬಳಿಕ ಪರೀಕ್ಷೆ ನಡೆಸಲು ವಿವಿಗಳು ನಿರ್ಧರಿಸಿವೆ ಎಂದು ಬೆಂಗಳೂರು ಕೇಂದ್ರ ವಿವಿ ಕುಲಪತಿ ಲಿಂಗರಾಜು ಗಾಂಧಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ವಿಮಾನ ಪತನ, ಪೈಲಟ್‌ಗಳ ಸ್ಥಿತಿ ಹೇಗಿದೆ ಗೊತ್ತಾ

ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರ ಭ್ರಷ್ಟಾಚಾರ: ಸಿ.ಟಿ.ರವಿ ಆರೋಪ

ಕೇಸರಿ ಧ್ವಜ ಹಿಡಿದು ಮೆರವಣಿಗೆಗೆ ಚಾಲನೆ: ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾದ ಉಡುಪಿ ಜಿಲ್ಲಾಧಿಕಾರಿ

ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು: ಸಿ.ಟಿ. ರವಿ ವಾಗ್ದಾಳಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments