Webdunia - Bharat's app for daily news and videos

Install App

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ: ವರ್ಕ್​ ಫ್ರಂ ಹೋಂಗೆ ಸುಪ್ರೀಂ ಸಲಹೆ

Webdunia
ಮಂಗಳವಾರ, 16 ನವೆಂಬರ್ 2021 (22:04 IST)
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಸ್ಥಿತಿ ಚಿಂತಾಜನಕ ತಲುಪಿರುವಂತೆ ಸುಪ್ರೀಂ ಕೋರ್ಟ್​ ಇಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ಪ್ರತಿಕ್ರಿಯೆಗಳನ್ನು ಪಡೆದು ವಿಶ್ಲೇಷಣೆ ನಡೆಸಿತು.
ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ​(ಎನ್​ಸಿಆರ್​)ದ ವಾಯುಮಾಲಿನ್ಯದ ಸಮಸ್ಯೆಗೆ ಪ್ರಮುಖ ಕಾರಣಗಳೆಂದರೆ ಧೂಳು, ಸಾರಿಗೆ ವಾಹನಗಳು, ಕೈಗಾರಿಕೆಗಳು, ವಾಹನ ದಟ್ಟಣೆ ಮತ್ತು ಕೆಲವು ಪ್ರದೇಶಗಳಲ್ಲಿ ರೈತರು ಹೊಲಕ್ಕೆ ಬೆಂಕಿಹಚ್ಚುವ ರೂಢಿ ಹೊಂದಿರುವುದು ಎಂದು ಕೋರ್ಟ್​ ಹೇಳಿದೆ.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ನಾಳೆ(ನ.16) ತುರ್ತುಸಭೆಯೊಂದನ್ನು ನಡೆಸಲು ಸುಪ್ರೀಂ ಕೋರ್ಟ್​ ಸೂಚಿಸಿದೆ. ಈ ಸಭೆಯಲ್ಲಿ ದೆಹಲಿ-ಎನ್​ಸಿಆರ್​ನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸುವುದು, ಅನಗತ್ಯ ವಾಹನ ಸಂಚಾರ ಮತ್ತು ವಿದ್ಯುತ್​​ ಘಟಕ​ಗಳನ್ನು ನಿಲ್ಲಿಸುವುದು, ನಾಗರೀಕರಿಗೆ ವರ್ಕ್​ ಫ್ರಂ ಹೋಂ ಅವಕಾಶ ಕಲ್ಪಿಸುವುದು ಮುಂತಾದ ಬಗ್ಗೆ ಚರ್ಚಿಸಲು ಕೋರ್ಟ್​ ನಿರ್ದೇಶಿಸಿದೆ.
ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಎನ್​ಸಿಆರ್​ ಪ್ರದೇಶಗಳನ್ನು ಹೊಂದಿರುವ ಇತರ ರಾಜ್ಯಗಳಾ ಪಂಜಾಬ್​, ಉತ್ತರಪ್ರದೇಶ ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿಗಳು ಈ ತುರ್ತು ಸಭೆಯಲ್ಲಿ ಭಾಗವಹಿಸಬೇಕು. ಸಭೆಯಲ್ಲಿ ಅಗತ್ಯ ನಿರ್ಧಾರ ಕೈಗೊಳ್ಳವವರೆಗೆ, ಈ ಪ್ರದೇಶದ ಸರ್ಕಾರಿ ನೌಕರರಿಗೆ ವರ್ಕ್​​ ಫ್ರಂ ಹೋಂ ಕಡ್ಡಾಯಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾಯಪೀಠ ಆದೇಶಿಸಿದೆ.
ವಿಚಾರಣೆಯನ್ನು ನ.17ರ ಬುಧವಾರಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಧರ್ಮಸ್ಥಳ: ಬುರುಡೆ ತಂದ ಚಿನ್ನಯ್ಯಗೆ ಸದ್ಯ ಜೈಲೇ ಗತಿ

ಅಹಮಾದಾಬಾದ್ ವಿಮಾನ ದುರಂತ: ಮಡಿದವರ ಆತ್ಮಕ್ಕೆ ಗೋಕರ್ಣದಲ್ಲಿ ಪಿತೃಕಾರ್ಯ

ಮುಂದಿನ ಸುದ್ದಿ
Show comments