Webdunia - Bharat's app for daily news and videos

Install App

ದುಬೈನಲ್ಲಿ ‘ಬಾಹ್ಯಾಕಾಶ’ದ ಅಪೂರ್ವ ಕಪ್ಪು ವಜ್ರ ಪ್ರದರ್ಶನ

Webdunia
ಬುಧವಾರ, 19 ಜನವರಿ 2022 (20:50 IST)
ಅಂತಾರಾಷ್ಟ್ರೀಯ ಹರಾಜು‌ ಸಂಸ್ಥೆಯಾದ ಸೊದೆಬಿಯ ದುಬೈ ಘಟಕವು  ಬಾಹ್ಯಾಕಾಶದಿಂದ ಬಂದಿದೆಯೆಂದು ನಂಬಲಾದ ಅಪರೂಪದ ಕಪ್ಪುವಜ್ರವನ್ನು ಪ್ರದರ್ಶನಕ್ಕಿರಿಸಿದೆ.
‘ದಿ ಎನಿಗ್ಮಾ’ ಎಂದು ಹೆಸರಿಡಲಾದ 555.55 ಕ್ಯಾರಟ್‌ನ ಕಪ್ಪು ವಜ್ರವು ಫೆಬ್ರವರಿಯಲ್ಲಿ ಲಂಡನ್‌ನಲ್ಲಿ ಹರಾಜಾಗಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ದುಬೈ ಹಾಗೂ ಅಮೆರಿಕದ ಲಾಸ್‌ಏಂಜಲೀಸ್‌ನಲ್ಲಿ ಅದರ ಪ್ರದರ್ಶನವನ್ನೇಪಡಿಸಲಾಗಿದೆ. ಸೋಮವಾರ ಈ ಅಪರೂಪದ ವಜ್ರವನ್ನು ಪತ್ರಕರ್ತರಿಗೆ ಪ್ರದರ್ಶಿಸಲಾಯಿತು.
ಈ ಅಪೂರ್ವ ವಜ್ರವು ಕನಿಷ್ಠ 50 ಲಕ್ಷ ಬ್ರಿಟಿಶ್ ಪೌಂಡ್ (6.8 ದಶಲಕ್ಷ ಡಾಲರ್) ಬೆಲೆಗೆ ಮಾರಾಟವಾಗುವ ನಿರೀಕ್ಷೆಯನ್ನು ಸೊದೆಬಿ ಹೊಂದಿದೆ. ಕ್ರಿಪ್ಟೊಕರೆನ್ಸಿಯನ್ನು ಕೂಡಾ ಪಾವತಿಯ ವಿಧಾನವಾಗಿ ಸ್ವೀಕರಿಸುವ ಯೋಜನೆಯನ್ನು ಸೊದೆಬಿ ಹೊಂದಿದೆ ಎಂದು ಮೂಲಗಳು ತಿಳಿಸಿವೆ.
‘ಎನಿಗ್ಮಾ’ ಕಪ್ಪು ವಜ್ರಕ್ಕೆ 5 ಅಂಕಿ ಮಹತ್ವದ್ದಾಗಿದೆ. ಈ ವಜ್ರವು 555.5 ಕ್ಯಾರಟ್ನದ್ದಾಗಿದ್ದು, 55 ಮುಖಗಳನ್ನು ಹೊಂದಿದೆಯೆಂದು ‘ಸೊದೆಬಿ ದುಬೈ’ನ ಆಭರಣ ತಜ್ಡೆ ಸೋಫಿ ಸ್ಟೀವನ್ಸ್ ತಿಳಿಸಿದ್ದಾರೆ.
ಈ ಕಪ್ಪು ವಜ್ರವು ಬಾಹ್ಯಾಕಾಶ ಮೂಲದ್ದೆಂದು ನಾವು ನಂಬುತ್ತೇವೆ. ಉಲ್ಕಾಶಿಲೆಗಳು ಭೂಮಿಯೊಂದಿಗೆ ಘರ್ಷಿಸುವಾಗ ಉಂಟಾಗುವ ರಾಸಾಯನಿಕ ಅನಿಲ ಸಂಯೋಜನೆಯಿಂದ ಈ ಕಪ್ಪು ಶಿಲೆ ರೂಪುಗೊಂಡಿರಬಹುದು ಅಥವಾ ಸ್ವತಃ ಉಲ್ಕಾಶಿಲೆಗಳಿಂದಲೇ ಅದು ಭೂಮಿಗೆ ಬಂದಿರಬಹುದು’’ ಎಂದು ಸೋಫಿಸ್ಟೀವನ್ಸ್ ಹೇಳಿದ್ದಾರೆ.
ಕಾರ್ಬನಾಡೊ ಎಂದು ಕೂಡಾ ಕರೆಯಲಾಗುವ ಕಪ್ಪುವಜ್ರವು ಅತ್ಯಂತ ಅಪರೂಪವಾಗಿ ದೊರೆಯುತ್ತದೆ. ಈವರೆಗೆ ಪ್ರಾಕೃತಿಕವಾಗಿ ಬ್ರೆಝಿಲ್ ಹಾಗೂ ಮಧ್ಯ ಆಫ್ರಿಕದಲ್ಲಿ ಮಾತ್ರವೇ ಸಿಕ್ಕಿವೆ.‌
ಈ ಅಪೂರ್ವ ವಜ್ರವು ಕನಿಷ್ಠ 50 ಲಕ್ಷ ಬ್ರಿಟಿಶ್ ಪೌಂಡ್ (6.8 ದಶಲಕ್ಷ ಡಾಲರ್) ಬೆಲೆಗೆ ಮಾರಾಟವಾಗುವ ನಿರೀಕ್ಷೆಯನ್ನು ಸೊದೆಬಿ ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments