ಕೋರ್ಟ್ ನಿರ್ದೇಶನ ಮಾಡಿದ ಅಕ್ರಮ ಕಟ್ಟಡಗಳ ಪಟ್ಟಿಯನ್ನು ನೇರವಾಗಿ ಹೈಕೋರ್ಟ್‍ಗೆ ವಿವರಣೆ

Webdunia
ಶುಕ್ರವಾರ, 4 ಫೆಬ್ರವರಿ 2022 (20:19 IST)
ಕೋರ್ಟ್ ನಿರ್ದೇಶನ ಮಾಡಿದ ಅಕ್ರಮ ಕಟ್ಟಡಗಳ ಪಟ್ಟಿಯನ್ನು ನೇರವಾಗಿ ಹೈಕೋರ್ಟ್‍ಗೆ ವಿವರಣೆ ನೀಡಲಾಗುವುದು ಎಂದು ಬಿಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
 
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ಮಾಹಿತಿಯನ್ನು ಹೈಕೋರ್ಟ್ ಕೇಳಿರುವುದರಿಂದ, ಮಾಹಿತಿಯನ್ನು ನೇರವಾಗಿ ಕೋರ್ಟ್‍ಗೆ ಸಲ್ಲಿಕೆ ಮಾಡಲಾಗುವುದು.
ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಸೂಕ್ತವಲ್ಲ. ಅಕ್ರಮ ಕಟ್ಟಡಗಳ ಮಾಲಕರಿಗೆ ನೋಟಿಸ್ ನೀಡುವಾಗ ಜನಪ್ರತಿನಿಧಿಗಳು ಅದನ್ನು ತಡೆದಿರುವ ಪ್ರಕರಣಗಳು ಪಾಲಿಕೆಯ ಗಮನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
 
ಜನರು ಇಂದಿರಾ ಕ್ಯಾಂಟೀನ್ ಬಳಕೆ ಕಡಿಮೆ ಮಾಡುತ್ತಿರುವುದರ ಕುರಿತು ಪರಿಶೀಲನೆ ಮಾಡಿ ಕ್ರಮವನ್ನು ತೆಗೆದುಕೊಳ್ಳಲಾಗುವುದು. ವಾರ್ಡ್‍ನಲ್ಲಿರುವ ಎಲ್ಲಾ ಕ್ಯಾಂಟೀನ್‍ಗಳಿಂದ ಮಾಹಿತಿ ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.
 
ರಾಜ್ಯ ಸರಕಾರದಿಂದ ಬರುವ ಅನುದಾನ ಮತ್ತು ಪಾಲಿಕೆಯ ಆದಾಯವನ್ನು ಪರಿಶೀಲಿಸಿಕೊಂಡು ಬಿಬಿಎಂಪಿ ಬಜೆಟ್ ಅನ್ನು ಮಂಡಿಸಲಾಗುವುದು. ರಾಜ್ಯ ಸರಕಾರವು ಸೂಚಿಸಿದ್ದಲ್ಲಿ, ಹೊಸ ಯೋಜನೆಗಳನ್ನು ಬಜೆಟ್‍ನಲ್ಲಿ ಸೇರಿಸಲಾಗುವುದು ಎಂದ ಅವರು, ಕೋವಿಡ್ ನಿಯಂತ್ರಣ ಕುರಿತು ಮಾತನಾಡಿ, ಒಂದು ವಾರದಲ್ಲೇ ಎಲ್ಲಾ ಅರ್ಹ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ ಕೆಲವು ಗೊಂದಲಗಳಿದ್ದು, ಈಗ ಅದನ್ನು ನಿವಾರಣೆ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments