Select Your Language

Notifications

webdunia
webdunia
webdunia
webdunia

ತುಮಕೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮಾಜಿ ಶಾಸಕರ ವಾಗ್ವಾದ

ತುಮಕೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮಾಜಿ ಶಾಸಕರ ವಾಗ್ವಾದ
ತುಮಕೂರು , ಗುರುವಾರ, 20 ಜುಲೈ 2017 (14:21 IST)
ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಬಿಜೆಪಿ ಮಾಜಿ ಶಾಸಕರಾದ  ಜೆ.ಸಿ.ಮಾಧುಸ್ವಾಮಿ ಮತ್ತು ಕಿರಣ್ ಕುಮಾರ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.
 
ಸಾರ್ವಜನಿಕರ ಆಸ್ತಿ ಹಾಳು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್, ಮತ್ತೊಬ್ಬ ಬಿಜೆಪಿ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ತಹಶೀಲ್ದಾರ ಕಚೇರಿಯ ಪೀಠೋಪಕರಣ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾಧುಸ್ವಾಮಿ ವಿರುದ್ಧ ಕ್ರಮಕೈಗೊಳ್ಳುವಂತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ಮಾಜಿ ಶಾಸಕ ಕಿರಣ್ ಕುಮಾರ್ ಗುಡುಗಿದ್ದಾರೆ.
 
ಬಿಜೆಪಿಯ ಉಭಯ ನಾಯಕರ ಮಧ್ಯೆ ಉಂಟಾಗಿರುವ ಭಿನ್ನಮತದಿಂದಾಗಿ ಬಿಜೆಪಿ ಜಿಲ್ಲಾ ಘಟಕದಲ್ಲಿ ಎರಡು ಬಣಗಳಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕೋವಿಂದ್`ಗೆ ಭಾರೀ ಮುನ್ನಡೆ