Publish Date: Sun, 24 May 2026 (14:14 IST)
Updated Date: Sun, 24 May 2026 (14:19 IST)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ ಆರಂಭದಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಅವರ ಭದ್ರತಾ ದಳ ವಾಹನ ಸಂಚರಿಸಬೇಕಿದ್ದ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ, ಕರ್ತವ್ಯ ಲೋಪದ ಆರೋಪದಡಿ ಒಬ್ಬ ಅಧಿಕಾರಿಯನ್ನು ಸೇರಿ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಮೇ 10ರಂದು ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ, ಪ್ರಧಾನಿಯವರು ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳುವ ಕೆಲವೇ ಗಂಟೆಗಳ ಮೊದಲು ಈ ಘಟನೆ ವರದಿಯಾಗಿದೆ.
ಈ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧೀಕ್ಷಕ ಶ್ರೀನಿವಾಸ ಗೌಡ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಭದ್ರತೆ ಮತ್ತು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಒಬ್ಬ ಪಿಎಸ್ಐ, ಒಬ್ಬ ಸಹಾಯಕ ಉಪನಿರೀಕ್ಷಕ ಮತ್ತು ನಾಲ್ವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಲಾಗಿದೆ.
ಪ್ರಧಾನಿ ನಗರಕ್ಕೆ ಆಗಮಿಸುವ ಸುಮಾರು ಎರಡು ಗಂಟೆಗಳ ಮೊದಲು, ಬೆಳಗ್ಗೆ 9 ಗಂಟೆ ಸುಮಾರಿಗೆ ರಸ್ತೆ ಬದಿಯಲ್ಲಿ ಅನುಮಾನಾಸ್ಪದ ಪೆಟ್ಟಿಗೆಯನ್ನು ಒಬ್ಬ ಕಾನ್ಸ್ಟೇಬಲ್ ಪತ್ತೆಹಚ್ಚಿದ್ದರಿಂದ ಪೊಲೀಸ್ ಇಲಾಖೆ ಮತ್ತು ಭದ್ರತಾ ಸಂಸ್ಥೆಗಳಲ್ಲಿ ಆತಂಕಕ್ಕೆ ಕಾರಣವಾಯಿತು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ