Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಸಂಬಂಧ FIRನಲ್ಲಿದೆ ಸ್ಫೋಟಕ ಮಾಹಿತಿ

Webdunia
ಗುರುವಾರ, 7 ಸೆಪ್ಟಂಬರ್ 2017 (17:21 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸಹೋದರಿ ಕವಿತಾ ಲಂಕೇಶ್ ನೀಡಿರುವ ದೂರಿನ ಪ್ರತಿ ವೆಬ್ ದುನಿಯಾ ಕನ್ನಡಕ್ಕೆ ಲಭ್ಯವಾಗಿದೆ.

ಸೆ.5 ರಂದು ಅಂದರೆ ಗೌರಿ ಲಂಕೇಶ್ ಹತ್ಯೆಯಾದ ದಿನ ರಾತ್ರಿ 8.26ಕ್ಕೆ ಅವರ ತಾಯಿ ಇಂದಿರಾ ಲಂಕೇಶ್ ದೂರವಾಣಿಗೆ ಅನಾಮಧೇಯ ವ್ಯಕ್ತಿ 988604**** ನಂಬರ್ ನಿಂದ ಕರೆ ಮಾಡಿದ್ದಾನೆ. ಗೌರಿ ಲಂಕೇಶ್ ಗೆ ಏನೋ ಆಗಿದೆ ತಕ್ಷಣ ಬನ್ನಿ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ವಿಷಯ ತಿಳಿದ ಕೂಡಲೇ ಆಕೆಯ ಸಹೋದರಿ ಕವಿತಾ ಲಂಕೇಶ್ ಸ್ಥಳಕ್ಕೆ ಬಂದಿದ್ದಾರೆ. ಅಷ್ಟೊತ್ತಿಗೆ ಗೌರಿ ಲಂಕೇಶ್ ಕಾರು(ಕೆಎ-05 ಎಂಆರ್-3782) ಮನೆಯ ಗೇಟ್ ಎದುರು ನಿಂತಿತ್ತು. ಕೂಡಲೇ ಒಳಗೆ ಹೋಗಿ ನೋಡಿದಾಗ ಗೌರಿ ಲಂಕೇಶ್ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಕಾಟ್ರೇಡ್ಜ್ ಪೀಸ್ ಗಳು ಬಿದ್ದಿದ್ದು, ಯಾರೋ ಶೂಟ್ ಮಾಡಿದ್ದಾರೆ. ಆಕೆಯ ಎದೆಗೆ 3 ಗುಂಡುಗಳು ತಗುಲಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದುಷ್ಕರ್ಮಿಗಳು ದುರುದ್ದೇಶದಿಂದ ನನ್ನ ಅಕ್ಕನನ್ನು ಹತ್ಯೆ ಮಾಡಿದ್ದಾರೆ ಎಂದು ಕವಿತಾ ಲಂಕೇಶ್ ದೂರು ನೀಡಿದ್ದಾರೆ. ಈ ಅನ್ವಯ ಐಪಿಸಿ ಸೆಕ್ಷನ್ 302 ಮತ್ತು ಶಸ್ತ್ರಾಸ್ತ್ರ ಕಾಯ್ದೆ 25 ಅಡಿಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments