Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಸ್ಫೋಟಕ್ಕೆ ಶಂಕಿತ ಉಗ್ರರು ಸಂಚು; ಸಿಸಿಬಿ ನೀಡಿದ ದೂರಿನಲ್ಲಿ ಮಾಹಿತಿ ಬಯಲು

Webdunia
ಮಂಗಳವಾರ, 14 ಜನವರಿ 2020 (11:13 IST)
ಬೆಂಗಳೂರು : ಬೆಂಗಳೂರಿನಲ್ಲಿ  ಸ್ಫೋಟಕ್ಕೆ ಶಂಕಿತ ಉಗ್ರರು ಸಂಚು ರೂಪಿಸಿದ್ದು, ಪೊಲೀಸರ ಎಚ್ಚರಿಕೆಯಿಂದ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ ಎಂಬುದಾಗಿ ತಿಳಿದುಬಂದಿದೆ.



ತನಿಖೆ ವೇಳೆ ಶಂಕಿತ ಉಗ್ರರ ಮಹಾ ಸಂಚು ತಿಳಿದುಬಂದಿದ್ದು, ಶಂಕಿತ ಉಗ್ರರ ವಿರುದ್ಧ ದಾಖಲಾದ ಎಫ್ ಐಆರ್ ಪ್ರತಿಯಲ್ಲಿ ಮಾಹಿತಿ ಬಯಲಾಗಿದೆ. ಐಸಿಸ್ ಸಂಘಟನೆಗೆ ಸೇರಿದ ಮೆಹಬೂಬ್ ಪಾಷಾ ಈ ಬಗ್ಗೆ ಸ್ಕೆಚ್ ಹಾಕಿದ್ದು, ಸಿಮಿ ಸಂಘಟನೆಯ ಸದಸ್ಯನ ಸಂಪರ್ಕದಲ್ಲಿದ್ದ ಮತ್ತೋರ್ವ ಮನ್ಸೂರ್ ಸ್ಫೋಟಕಕ್ಕೆ ಬೇಕಾದ  ಶಸ್ತ್ರಾಸ್ತ್ರ ಮತ್ತು ಸ್ಪೋಟಕ ಗಳನ್ನು ಸಂಗ್ರಹ ಮಾಡುತ್ತಿದ್ದರು ಎನ್ನಲಾಗಿದೆ.


2019ರ ಜುಲೈನಿಂದ ನಗರದಲ್ಲಿ ಶಂಕಿತ ಉಗ್ರರ ಸಂಚು ನಡೆದಿದ್ದು, ಸದ್ಯ ಸಿಸಿಬಿ ಇನ್ಸ್ ಪೆಕ್ಟರ್ ದೂರಿನ ಮೇರೆಗೆ ಈ ಬಗ್ಗೆ ಎಸ್.ಜಿ.ಪಾಳ್ಯ ಪೊಲೀಸ್ ಠಾಣೆಯಲ್ಲಿ 17 ಜನರ ಮೇಲೆ ಎಫ್ ಐಆರ್ ದಾಖಲಾಗಿದೆ.  ಸಿಸಿಬಿ ನೀಡಿದ ದೂರಿನಲ್ಲಿ ಸ್ಪೋಟಕ ಮಾಹಿತಿ ಉಲ್ಲೇಖ ವಾಗಿದ್ದು, ಎಫ್ ಐಆರ್ ನಲ್ಲಿ ಶಂಕಿತರ ಕಾರ್ಯ ಚಟುವಟಿಕೆಯ ಕಂಪ್ಲೀಟ್ ಮಾಹಿತಿ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments