Webdunia - Bharat's app for daily news and videos

Install App

ಬಿಜೆಪಿ ಸಂಸದನ ಸ್ಫೋಟಕ ಹೇಳಿಕೆ!

Webdunia
ಶನಿವಾರ, 24 ಜುಲೈ 2021 (10:59 IST)
ಚಾಮರಾಜನಗರ(ಜು.24): ಸಮ್ಮಿಶ್ರ ಸರ್ಕಾರ ಪತನದ ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಾಗಲೇ ಯಡಿಯೂರಪ್ಪ ಅವರಿಗೆ 2 ವರ್ಷ ಮುಖ್ಯಮಂತ್ರಿ ಸ್ಥಾನ ಎಂದು ಪಕ್ಷದ ಹೈಕಮಾಂಡ್ ಮತ್ತು ಯಡಿಯೂರಪ್ಪ ಅವರ ಮಧ್ಯೆ ಒಪ್ಪಂದವಾಗಿತ್ತು ಎಂಬ ವಿಚಾರವನ್ನು ಸಂಸದ ವಿ.ಶ್ರೀನಿವಾಸಪ್ರಸಾದ್ ಬಹಿರಂಗಗೊಳಿಸಿದ್ದಾರೆ.

* ಶ್ರೀನಿವಾಸ ಪ್ರಸಾದ್ ಸ್ಫೋಟಕ ಹೇಳಿಕೆ
* ಸಿಎಂ ಹುದ್ದೆ ತ್ಯಜಿಸಲು 2 ವರ್ಷ ಹಿಂದೆಯೇ ಒಪ್ಪಂದ
* ‘ಇದು ಸ್ವಾಮೀಜಿಗಳಿಗೆ ಸಂಬಂಧಿಸಿದ್ದಲ್ಲ’

 
 ಜೊತೆಗೆ ಇದು ಹೈಕಮಾಂಡ್ ಮತ್ತು ಯಡಿಯೂರಪ್ಪನವರ ಮಧ್ಯೆ ನಡೆದಿದ್ದು, ಮೂರನೆಯವರಿಗೆ ಸಂಬಂಧವಿಲ್ಲ ಎನ್ನುವ ಮೂಲಕ ಈ ರಾಜಕೀಯ ಬೆಳವಣಿಗೆಯಲ್ಲಿ ಮಠಾಧಿಪತಿಗಳು ಪ್ರವೇಶಿಸುವ ಅಗತ್ಯವಿಲ್ಲ ಎಂದು ಸೂಚ್ಯವಾಗಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ರಾಜ್ಯದ ವಿವಿಧ ಸ್ವಾಮೀಜಿಗಳು ಪಟ್ಟು ಹಿಡಿಯುತ್ತಿರುವ ಬಗ್ಗೆ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರನ್ನು ಮುಂದುವರಿಸಿ ಎಂದು ಸ್ವಾಮೀಜಿಗಳು ಹೇಳುತ್ತಿದ್ದಾರೆ. ಆದರೆ ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸ್ವಾಮೀಜಿಗಳು ಸೂಪರ್ ಹೈಕಮಾಂಡ್ ಅಲ್ಲ. ಸ್ವಾಮೀಜಿಗಳಾಗಲಿ, ಅಭಿಮಾನಿಗಳಾಗಲಿ, ಹಿತೈಷಿಗಳಾಗಲಿ ವಿಕೋಪಕ್ಕೆ ಹೋಗಬಾರದು ಎಂದು ಅಭಿಪ್ರಾಯಪಟ್ಟರು.
75 ವರ್ಷ ಆದವರು ಯಾರೂ ಪಕ್ಷದ ಮುಖ್ಯವಾದ ಹುದ್ದೆಯಲ್ಲಿ ಇರಬಾರದು ಎಂಬುದು ಹೈಕಮಾಂಡ್ ತೀರ್ಮಾನ. ಇದೇ ಕಾರಣಕ್ಕೆ ಎಲ್.ಕೆ.ಅಡ್ವಾಣಿ ಅವರನ್ನೂ ನಿವೃತ್ತಿಗೊಳಿಸಲಾಗಿದೆ. ಆದರೂ ತಮಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಯಡಿಯೂರಪ್ಪನವರೇ ಸ್ಪಷ್ಟವಾಗಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಪತನದ ಬಳಿಕ ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಾಗಲೇ ಎರಡು ವರ್ಷ ಅವಕಾಶ ಕೊಡುತ್ತೇವೆ, ಎರಡು ವರ್ಷ ಅಧಿಕಾರ ಮಾಡಿ ಎಂದು ಹೈಕಮಾಂಡ್ ಮತ್ತು ಯಡಿಯೂರಪ್ಪ ಮಧ್ಯೆ ಒಪ್ಪಂದ ಆಗಿತ್ತು. ಹೈಕಮಾಂಡ್ ಒಪ್ಪಂದದಂತೆ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಈಗ ಒಪ್ಪಂದ ಒಂದು ಹಂತಕ್ಕೆ ಬಂದಿದೆ. ನಾವು ಅದರ ಬಗ್ಗೆ ಹೇಳುವಂಥದ್ದಿಲ್ಲ ಎಂದರು.
ಇದೇ ವೇಳೆ ಮುಂದೆ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ಯಾರೂ ನಿಖರವಾಗಿ ಹೇಳಲಿಕ್ಕಾಗುವುದಿಲ್ಲ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ಮುಖ್ಯಮಂತ್ರಿ ಬದಲಾವಣೆ ಇಂದಿನ ಸ್ಥಿತಿ ನೋಡಿದರೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ. 26ಕ್ಕೆ 2 ವರ್ಷಾವಾಗುತ್ತಿದೆ. ಯಡಿಯೂರಪ್ಪನವರಿಗೆ 78 ವರ್ಷ ಆಗುತ್ತಿದೆ. ಹಾಗಾಗಿ ಏನು ಒಪ್ಪಂದ ಇದೆಯೋ ಆ ರೀತಿ ನಡೆಯುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments