Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕನ ಆಪ್ತನ ಮನೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ

ಚಿಕ್ಕಮಗಳೂರು
ಚಿಕ್ಕಮಗಳೂರು , ಸೋಮವಾರ, 2 ಮಾರ್ಚ್ 2020 (08:57 IST)
ಚಿಕ್ಕಮಗಳೂರು : ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ ಆಪ್ತ ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದ ಹಿನ್ನಲೆಯಲ್ಲಿ ಆತನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಸ್ಫೋಟಕ ವಸ್ತುಗಳು ದೊರಕಿವೆ.


ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಐಟಿ ಸೇಲ್ ಮುಖ್ಯಸ್ಥನಾಗಿರುವ ಶಬರೀಶ್ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ವೇಳೆ ಅಲ್ಲಿ ಅವರಿಗೆ ನಕ್ಷತ್ರ ಆಮೆ, ಕಲ್ಲು ಆನೆ, ಗನ್, ಪಿಸ್ತೂಲ್, ಬುಲೆಟ್, ಗಂಧದ ತುಂಡುಗಳು ಮತ್ತು ಜಿಲೆಟಿನ್ ಕಡ್ಡಿಗಳು  ಪತ್ತೆಯಾಗಿವೆ.


ಈ ವಸ್ತುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು ಮನೆಯಲ್ಲಿದ್ದ ಶಬರೀಶ್ ನ ತಂದೆ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶಬರೀಶ್ ನ ಮನೆಯಲ್ಲಿ ಸ್ಫೋಟಕ ವಸ್ತುಗಳು ದೊರೆತ ಹಿನ್ನಲೆಯಲ್ಲಿ ಪೊಲೀಸರಿಗೆ ಈತನ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ