ಓಟೆ ಹುಳು ಇಲ್ಲದ ಮಾವು ರಫ್ತು!

Webdunia
ಶುಕ್ರವಾರ, 29 ಏಪ್ರಿಲ್ 2022 (11:50 IST)
ರಾಜ್ಯದಲ್ಲಿ ಇದೇ ಮೊದಲ ಬಾರಿ ಸರ್ಕಾರಿ ಸ್ವಾಮ್ಯದಲ್ಲಿ ಪ್ರಾರಂಭವಾಗಿರುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸುಸಜ್ಜಿತ ‘ಮಾವು ಸಂಸ್ಕರಣಾ ಘಟಕ’ ಮೊದಲ ವರ್ಷವೇ 25 ಟನ್ ಮಾವಿನ ಹಣ್ಣು ಸಂಸ್ಕರಿಸಿ ವಿವಿಧ ದೇಶಗಳಿಗೆ ರಫ್ತು ಮಾಡಿದೆ.

ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮಾಡಿಕೆರೆಯಲ್ಲಿ ಸುಮಾರು 1.10 ಕೋಟಿ ರು. ವೆಚ್ಚದಲ್ಲಿ ಪ್ರಾರಂಭಿಸಿರುವ ಸಂಸ್ಕರಣಾ ಘಟಕವು ಫರೀದಾಬಾದ್ನ ರಾಷ್ಟ್ರೀಯ ಸಸ್ಯ ಉತ್ಪನ್ನ ಮತ್ತು ಸಂಸ್ಕರಣ ಕೇಂದ್ರ,

ರಾಜ್ಯದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದಿಂದ ಮಾನ್ಯತೆ ಪಡೆದುಕೊಂಡಿದೆ. ರಾಜ್ಯದ ಮಾವಿನ ಓಟೆಯಲ್ಲಿ ಹುಳ ಕಂಡು ಬರುತ್ತಿತ್ತು.

ಇದೇ ಕಾರಣದಿಂದಾಗಿ ಭಾರತದಲ್ಲಿ ಬೆಳೆಯುತ್ತಿರುವ ಮಾವಿನ ಹಣ್ಣುಗಳಿಗೆ ಹೊರ ರಾಷ್ಟ್ರಗಳು ನಿಷೇಧ ಹೇರಿದ್ದವು. ಇದರಿಂದ ಮಾವಿನ ರಫ್ತಿನ ಮೇಲೆ ಪರಿಣಾಮ ಬೀರಿತ್ತು. ಹಾಗಾಗಿ ವಿದೇಶಗಳಿಗೆ ಗುಣಮಟ್ಟದ ಮಾವು ರಫ್ತು ಮಾಡಲು ಸಂಸ್ಕರಣಾ ಘಟಕ ಪ್ರಾರಂಭಿಸಲಾಗಿದೆ.

ಈ ಘಟಕದಿಂದ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಮಾವು ಬೆಳೆಗಾರರು ತಮ್ಮ ಉತ್ಪನ್ನಗಳ ಸಂಸ್ಕರಣೆ ಮಾಡಿ ರಫ್ತು ಮಾಡಲು ನೆರವಾಗಲಿದೆ ಎಂದು ಮಾವು ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ, ಭಾರಿ ಮಳೆಯಲ್ಲಿ ಟಿಕೆಟ್ ಇಲ್ಲ ಎಂದು ಯವತಿಯನ್ನು ರೈಲಿನಿಂದ ಹೊರಹಾಕಿದ ಟಿಟಿಇ: ಇದು ಸರೀನಾ Video

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ Video

ನಮಗೆ ಹೇಳ್ತೀರಿ.. ನೀವೂ ಫೈನ್ ಕಟ್ಟಿ: ಹೆಲ್ಮೆಟ್ ಧರಿಸದೇ ಬಂದ ಪೊಲೀಸಪ್ಪ ಸರಿಯಾಗಿ ತಗ್ಲಾಕೊಂಡ್ರು Video

ನಾಗರಹೊಳೆ ಪ್ರದೇಶದಲ್ಲಿ ರಸ್ತೆ ಬದಿ ಕಂಡುಬಂದ ಆನೆಗೆ ಯುವಕರಿಂದ ಇದೆಂಥಾ ಕಿರುಕುಳ Video

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಮುಂದಿನ ಸುದ್ದಿ
Show comments