Webdunia - Bharat's app for daily news and videos

Install App

ಒಡಿಶಾದಲ್ಲಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ

Webdunia
ಶುಕ್ರವಾರ, 9 ಜೂನ್ 2023 (20:00 IST)
ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿದ್ದಾರೆ. ಈ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಆದರೆ, ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ಒಡಿಶಾದ ನುವಾಪಾದ ಜಿಲ್ಲೆಯಲ್ಲಿ ಗುರುವಾರ ದುರ್ಗ್-ಪುರಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಅದೃಷ್ಟವಶಾತ್‌ ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖರಿಯಾರ್ ರೋಡ್ ನಿಲ್ದಾಣವನ್ನು ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಪತ್ತೆಯಾಗಿದೆ. ಘರ್ಷಣೆ ಮತ್ತು ಬ್ರೇಕ್‌ಗಳ ಅಪೂರ್ಣ ರಿಲೀಸ್‌ನಿಂದಾಗಿ ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಮಾತ್ರ ಸೀಮಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments