ಮಾರಕಾಸ್ತ್ರ ತೋರಿಸಿ ಕಂಡ ಕಂಡಲ್ಲಿ ಸುಲಿಗೆ

Webdunia
ಸೋಮವಾರ, 16 ಜನವರಿ 2023 (19:18 IST)
ಪಲ್ಸರ್ ಬೈಕ್ ಹತ್ತಿ ಹೊರಟರೆ ಸಾಕು, ಮಾರಕಾಸ್ತ್ರ ತೋರಿಸಿ ಕಂಡ ಕಂಡಲ್ಲಿ ಸುಲಿಗೆ ಮಾಡುತ್ತಿದ್ದ ಇಬ್ಬರು ನಟೋರಿಯಸ್ ಸುಲುಗೆಕೋರರನ್ನ ಕೊನೆಗೂ ರಾಜಗೋಪಾಲ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ‌‌. ಐವತ್ತಕ್ಕೂ ಅಧಿಕ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಅಬ್ರಹಾರ್ ಹಾಗೂ ಅಫ್ತಾಬ್ ಬಂಧಿತ ಆರೋಪಿಗಳು.
 
ಕೆ.ಜಿ.ಹಳ್ಳಿಯ, ಡಿ.ಜೆ.ಹಳ್ಳಿ ಭಾಗದಲ್ಲಿ ಜನರ ನಿದ್ದೆಗೆಡಿಸಿದ್ದ ಅಬ್ರಹಾರ್ ಹಾಗೂ ಮಿರಾಜ್ ಅಬ್ರಹಾರ್ ತಂಡ ಈ ಹಿಂದೆ ಶಿವಾಜಿನಗರದಲ್ಲಿ ಉದ್ಯಮಿಯೊಬ್ಬರನ್ನ ಹಾಡಹಗಲೇ ಸುಲಿಗೆ ಮಾಡಿ ಸುದ್ದಿಯಾಗಿತ್ತು. ಬಂಧನಕ್ಕೆ ತೆರಳಿದ್ದಾಗ ತುಮಕೂರು ಹಾಗೂ ಕೋಲಾರದಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಎಸ್ಕೇಪ್ ಆಗಿತ್ತು. ಸಲೀಂ ಎಂಬಾತನ ಹತ್ಯೆ ಪ್ರಕರಣದಲ್ಲಿ ಕೆ.ಜಿ ಹಳ್ಳಿ ಪೊಲೀಸರು ಈ ಇಬ್ಬರು ಆರೋಪಿಗಳಿಗಾಗಿ ತಲಾಶ್ ನಡೆಸಿದ್ದರು. ಪುಟ್ಟೇನಹಳ್ಳಿ ಬಳಿ ಆರೋಪಿಗಳನ್ನ ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ದಾಳಿ ಮಾಡಿತ್ತು. ಸದ್ಯ ಮಿರಾಜ್ ಅಬ್ರಹಾರ್ ಜೈಲಿನಲ್ಲಿದ್ದರೆ ಅಬ್ರಹಾರ್ ಹಾಗೂ ಅಫ್ತಾಬ್ ಹೊರಗಡೆ ದರೋಡೆಗಳಲ್ಲಿ ಸಕ್ರಿಯವಾಗಿದ್ದರು.
 
ರಾಜಗೋಪಲನಗರ, ಕಾಮಾಕ್ಷಿಪಾಳ್ಯ, ಕೆ.ಜಿ.ಹಳ್ಳಿ  ಭಾಗದಲ್ಲಿ ಸುಲಿಗೆ ಮಾಡುತ್ತಿದ್ದ ಆರೋಪಿಗಳು ಇತ್ತೀಚಿಗೆ ಬಿಟಿಎಂ ಲೇಔಟ್ ನಲ್ಲಿ ಹಾಡಹಗಲೇ ರಸ್ತೆಯಲ್ಲೇ ಮಾರಕಾಸ್ತ್ರ ಹಿಡಿದು ಸುಲಿಗೆ ಮಾಡುವ ದೃಶ್ಯಗಳು ವೈರಲ್ ಆಗಿದ್ದವು. ಸದ್ಯ ಇಬ್ಬರನ್ನೂ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments