Publish Date: Sat, 07 Dec 2019 (20:15 IST)
Updated Date: Sat, 07 Dec 2019 (20:17 IST)
ರಾಜ್ಯದ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಯ ಕಾವು ತಣ್ಣಗಾಗಿದೆ. ಇದೀಗ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ತವರು ಕ್ಷೇತ್ರವಾದ ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಜೆಡಿಎಸ್ - ಬಿಜೆಪಿ ಅಭ್ಯರ್ಥಿ ಪರ ಬೆಟ್ಟಿಂಗ್ ಕಾರ್ಯ ನಡೆಯುತ್ತಿದೆ.
ಮಂಡ್ಯ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗೆಲ್ಲೋ ವಿಶ್ವಾಸದಲ್ಲಿ ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಅರಳಿಕಟ್ಪೆ, ಟೀ ಸ್ಟಾಲ್, ಹೋಟೆಲ್ ಗಳಲ್ಲಿ ರಾಜಕೀಯದ್ದೇ ಚರ್ಚೆ ನಡೆಯುತ್ತಿದೆ. ಹಣದ ಜೊತೆಗೆ ಕಾರು, ಬೈಕ್, ಟ್ರ್ಯಾಕ್ಟರ್, ಕುರಿ, ಕೋಳಿ, ಎಮ್ಮೆ, ಹಸುಗಳನ್ನ ಪಣಕ್ಕಿಟ್ಟು ಬೆಟ್ಟಿಂಗ್ ನಡೆಯುತ್ತಿದೆ.