Webdunia - Bharat's app for daily news and videos

Install App

ಫೇಸ್ ಬುಕ್ ಬಳಕೆದಾರರೇ ಎಚ್ಚರ..! ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

Webdunia
ಶನಿವಾರ, 12 ಆಗಸ್ಟ್ 2023 (08:01 IST)
ಬೆಂಗಳೂರು : ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ.
 
ಬೆಂಗಳೂರಿನ ಪೀಣ್ಯ ನಿವಾಸಿ ಆಗಿರುವ ಪ್ಯಾಟ್ರಿಕ್ ರೋಹನ್ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಫೇಸ್ ಬುಕ್ನಲ್ಲಿ ನಾಲ್ವರು ಅಪರಿಚಿತರ ಸ್ನೇಹ ಬೆಳೆಸಿ ಇದೀಗ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರೋಹನ್ಗೆ ಫೇಸ್ ಬುಕ್ನಲ್ಲಿ ಮಿಸ್ ಝಾ ಎಂಬ ಅಪರಿಚಿತ ವ್ಯಕ್ತಿಯ ಗೆಳೆತನವಿತ್ತು. ಆಕೆ ಲಂಡನ್ನಲ್ಲಿ ಡಿಸೈನರ್ ಆಗಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಳು. ಇತ್ತ ರೋಹನ್ ನಂಬುತ್ತಿದ್ದಂತೆ ಮಿಸ್ ಝಾ ತನ್ನ ಇತರೆ ಸ್ನೇಹಿತರಾದ ಪ್ರಿಯಾಂಕ್ ಸಕ್ಸೇನಾ, ಗೌತಮ್ ಸೇನ್ ಮತ್ತು ರೋಹಿತ್ ಜೈನ್ ಎನ್ನುವವರನ್ನು ಪರಿಚಯಿಸಿದ್ದು, ನಾವು ಸ್ನೇಹಿತರೆಂದು ಹೇಳಿಕೊಂಡಿದ್ದಾರೆ.

ಶರ್ಟ್, ಬೂಟ್ ಮತ್ತು ಉಂಗುರಗಳಂತಹ ಉಡುಗೊರೆಗಳನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದು, ಅದಕ್ಕೆ ಕಸ್ಟಮ್ಸ್ನಲ್ಲಿ ಪಾವತಿಸಲು ಪ್ರಿಯಾಂಕ್ ಸಕ್ಸೇನಾಗೆ ಹಣ ಕಳುಹಿಸುವಂತೆ ಮಿಸ್ ಝಾ ರೋಹನ್ಗೆ ಹೇಳಿದ್ದಾಳೆ. ಇತ್ತ ರೋಹನ್ ಹಣವನ್ನು ವರ್ಗಾಯಿಸುತ್ತಿದ್ದಂತೆ ಆರೋಪಿಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments