Webdunia - Bharat's app for daily news and videos

Install App

ಕೋಲಾರ ಕಾಂಗ್ರೆಸ್ನಲ್ಲಿ ಮತ್ತೆ ಆರಂಭವಾಯ್ತು ಗುಂಪುಗಾರಿಕೆ?

Webdunia
ಸೋಮವಾರ, 20 ಮಾರ್ಚ್ 2023 (09:26 IST)
ಕೋಲಾರ : ಕೋಲಾರ ಸ್ಪರ್ಧೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೆ ಸರಿಯುವ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೋಲಾರದಲ್ಲಿ ಸಿದ್ದು ಬದಲಿಗೆ ಕಾಂಗ್ರೆಸ್ನಿಂದ ಅಭ್ಯರ್ಥಿ ಯಾರು ಎನ್ನುವ ಕುರಿತು ಚರ್ಚೆ ಜೋರಾಗಿದ್ದು, ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಬಣ ರಾಜಕೀಯ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.
 
ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿದೆ. ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತವನ್ನು ಜ.9ರಂದು ಕೋಲಾರದಲ್ಲಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೋಲಾರದಲ್ಲಿ ಸಿದ್ದು ಸ್ಪರ್ಧೆಗೆ ಪೂರ್ವ ತಯಾರಿಯನ್ನು ಮಾಡಲಾಯಿತು.

ವಾರ್ಡ್ ಸಭೆಗಳು, ಗ್ರಾಮಾಂತರ ಸಭೆಗಳು ಸೇರಿದಂತೆ ಒಂದಿಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಅಷ್ಟೊಂದು ಸೇಫ್ ಅಲ್ಲ, ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದೆ ಎನ್ನಲಾಗಿದೆ.

ಇದರಿಂದ ಸಿದ್ದರಾಮಯ್ಯ ಕೋಲಾರದಿಂದ ಯೂಟರ್ನ್ ಹೊಡೆದ ಮೇಲೆ ಕೋಲಾರದ ಕಾಂಗ್ರೆಸ್ ವಲಯದಲ್ಲಿ ಸಿದ್ದು ಬದಲಿಗೆ ಯಾರು ಕಾಂಗ್ರೆಸ್ ಅಭ್ಯರ್ಥಿ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ಜೊತೆಗೆ ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಮತ್ತೆ ಸಕ್ರಿಯವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments