Publish Date: Fri, 14 Apr 2023 (19:10 IST)
Updated Date: Fri, 14 Apr 2023 (19:28 IST)
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಸೋಮನಗೌಡ ಪಾಟೀಲ ಮನಗೂಳಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದಾರೆ. ಸೋಮನಗೌಡ ಪಾಟೀಲ್ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮನನೊಂದ ಪಟ್ಟಣ ಪಂಚಾಯತಿ 12 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಸವನ ಬಾಗೇವಾಡಿಯಲ್ಲಿ ಮಾಜಿ ಸಚಿವ S.K. ಬೆಳ್ಳುಬ್ಬಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಸೋಮನಗೌಡ ಬೆಂಬಲಿಗರು ಅಸಮಾಧಾನ ಹೊರಹಾಕಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಬಲಿಗರ ಸಭೆ ಕರೆದಿರುವ ಸೋಮನಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಬಿಜೆಪಿ ಪಕ್ಷದ ಮೇಲೆ ನನಗೆ ನಂಬಿಕೆಯಿಲ್ಲ... BJP ಪಕ್ಷವನ್ನು ನಾನು ಸಾಕಷ್ಟು ನಂಬಿದ್ದೆ, ಆದ್ರೆ ನನಗೆ ಅನ್ಯಾಯವಾಗಿದೆ. ಮುಖಂಡರ ಚರ್ಚೆ ಬಳಿಕ ಮುಂದಿನ ನಿರ್ಣಯ ಕೈಗೊಳ್ಳುವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.