Select Your Language

Notifications

webdunia
webdunia
webdunia
webdunia

ಬಿಜೆಪಿ ಪಕ್ಷದ ಮೇಲೆ ನಂಬಿಕೆ ಹೋಯ್ತು’

ಬಿಜೆಪಿ ಪಕ್ಷದ ಮೇಲೆ ನಂಬಿಕೆ ಹೋಯ್ತು’
ವಿಜಯಪುರ , ಶುಕ್ರವಾರ, 14 ಏಪ್ರಿಲ್ 2023 (19:10 IST)
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಸೋಮನಗೌಡ ಪಾಟೀಲ ಮನಗೂಳಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದಾರೆ. ಸೋಮನಗೌಡ ಪಾಟೀಲ್​ಗೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಮನನೊಂದ ಪಟ್ಟಣ ಪಂಚಾಯತಿ 12 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಸವನ ಬಾಗೇವಾಡಿಯಲ್ಲಿ ಮಾಜಿ ಸಚಿವ S.K. ಬೆಳ್ಳುಬ್ಬಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಸೋಮನಗೌಡ ಬೆಂಬಲಿಗರು ಅಸಮಾಧಾ‌ನ ಹೊರಹಾಕಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಬಲಿಗರ ಸಭೆ ಕರೆದಿರುವ ಸೋಮನಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಬಿಜೆಪಿ ಪಕ್ಷದ ಮೇಲೆ ನನಗೆ ನಂಬಿಕೆಯಿಲ್ಲ... BJP ಪಕ್ಷವನ್ನು ನಾನು ಸಾಕಷ್ಟು ನಂಬಿದ್ದೆ, ಆದ್ರೆ ನನಗೆ ಅನ್ಯಾಯವಾಗಿದೆ. ಮುಖಂಡರ ಚರ್ಚೆ ಬಳಿಕ ಮುಂದಿನ ನಿರ್ಣಯ ಕೈಗೊಳ್ಳುವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ