Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಮಾಲೀಕನ ಪತ್ತೆ ಹಚ್ಚಿದ ನಾಯಿಗಳು

Webdunia
ಶನಿವಾರ, 30 ಏಪ್ರಿಲ್ 2016 (08:26 IST)
ಎರಡು ಮೂರು ದಿನಗಳಿಂದ ಕಾಣೆಯಾಗಿದ್ದ ಯುವಕನೊಬ್ಬನನ್ನು ಆತನ ನಾಯಿಗಳೇ ಕಂಡು ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆದರೆ ದುರದೃಷ್ಟಾವತ್ ಆತ ಶವವಾಗಿ ಪತ್ತೆಯಾಗಿದ್ದಾನೆ. 

ಮೃತನನ್ನು ಯಮಲೂರು ನಿವಾಸಿಯಾದ ಪರಮೇಶ್ವರ್ ಎಂದು ಗುರುತಿಸಲಾಗಿದ್ದು 38 ವರ್ಷವಾದರೂ ವಿವಾಹವಾಗಿಲ್ಲವೆಂದುಜೀವನದಲ್ಲಿ ಜಿಗುಪ್ಸೆಗೊಂಡಿದ್ದನೆಂದು ತಿಳಿದು ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. 
 
ಬೆಳ್ಳಂದೂರು ಕೆರೆ ಪಕ್ಕದಲ್ಲಿ ಬಿದ್ದಿದ್ದ ಶವವನ್ನು, ಅವನು ಸಾಕಿದ್ದ ನಾಯಿಗಳೇ ಪತ್ತೆ ಮಾಡಿವೆ. 
 
ಮಂಗಳವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಆತನನ್ನು ಅವನ ಸಹೋದರರು ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಗುರುವಾರ ರಾತ್ರಿ 11 ಗಂಟೆಗೆ ಪರಮೇಶ್ವರ್ ಸಾಕಿದ್ದ ನಾಯಿಗಳು ಕೆರೆ ಬಳಿಯಲ್ಲಿ ನಿಂತು ಕೂಗುತ್ತಿದ್ದವು. ಅಲ್ಲಿಗೆ ಹೋಗಿ ಪರಿಶೀಲಿಸಿದ ಸಹೋದರರಿಗೆ ಪರಮೇಶ್ವರ್ ಶವ ಪತ್ತೆಯಾಗಿದೆ. 
 
ನಾಯಿಗಳನ್ನು ಅತಿಯಾಗಿ ಪ್ರೀತಿಸುತ್ತಿದ್ದ ಪರಮೇಶ್ವರ್ ಬೀದಿನಾಯಿಗಳಿಗೂ ಸದಾ ಆಹಾರ ನೀಡುತ್ತಿದ್ದ. ಜತೆಗೆ ತಾನು ಎರಡು ನಾಯಿಗಳನ್ನು ಸಾಕಿಕೊಂಡಿದ್ದ ಎಂದು ತಿಳಿದು ಬಂದಿದೆ. 
 
ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments