Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಮಾಲೀಕನ ಪತ್ತೆ ಹಚ್ಚಿದ ನಾಯಿಗಳು

Webdunia
ಶನಿವಾರ, 30 ಏಪ್ರಿಲ್ 2016 (08:26 IST)
ಎರಡು ಮೂರು ದಿನಗಳಿಂದ ಕಾಣೆಯಾಗಿದ್ದ ಯುವಕನೊಬ್ಬನನ್ನು ಆತನ ನಾಯಿಗಳೇ ಕಂಡು ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆದರೆ ದುರದೃಷ್ಟಾವತ್ ಆತ ಶವವಾಗಿ ಪತ್ತೆಯಾಗಿದ್ದಾನೆ. 

ಮೃತನನ್ನು ಯಮಲೂರು ನಿವಾಸಿಯಾದ ಪರಮೇಶ್ವರ್ ಎಂದು ಗುರುತಿಸಲಾಗಿದ್ದು 38 ವರ್ಷವಾದರೂ ವಿವಾಹವಾಗಿಲ್ಲವೆಂದುಜೀವನದಲ್ಲಿ ಜಿಗುಪ್ಸೆಗೊಂಡಿದ್ದನೆಂದು ತಿಳಿದು ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. 
 
ಬೆಳ್ಳಂದೂರು ಕೆರೆ ಪಕ್ಕದಲ್ಲಿ ಬಿದ್ದಿದ್ದ ಶವವನ್ನು, ಅವನು ಸಾಕಿದ್ದ ನಾಯಿಗಳೇ ಪತ್ತೆ ಮಾಡಿವೆ. 
 
ಮಂಗಳವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಆತನನ್ನು ಅವನ ಸಹೋದರರು ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಗುರುವಾರ ರಾತ್ರಿ 11 ಗಂಟೆಗೆ ಪರಮೇಶ್ವರ್ ಸಾಕಿದ್ದ ನಾಯಿಗಳು ಕೆರೆ ಬಳಿಯಲ್ಲಿ ನಿಂತು ಕೂಗುತ್ತಿದ್ದವು. ಅಲ್ಲಿಗೆ ಹೋಗಿ ಪರಿಶೀಲಿಸಿದ ಸಹೋದರರಿಗೆ ಪರಮೇಶ್ವರ್ ಶವ ಪತ್ತೆಯಾಗಿದೆ. 
 
ನಾಯಿಗಳನ್ನು ಅತಿಯಾಗಿ ಪ್ರೀತಿಸುತ್ತಿದ್ದ ಪರಮೇಶ್ವರ್ ಬೀದಿನಾಯಿಗಳಿಗೂ ಸದಾ ಆಹಾರ ನೀಡುತ್ತಿದ್ದ. ಜತೆಗೆ ತಾನು ಎರಡು ನಾಯಿಗಳನ್ನು ಸಾಕಿಕೊಂಡಿದ್ದ ಎಂದು ತಿಳಿದು ಬಂದಿದೆ. 
 
ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments