Webdunia - Bharat's app for daily news and videos

Install App

ನಕಲಿ ಸೇನಾಧಿಕಾರಿ ಅರೆಸ್ಟ್

Webdunia
ಶುಕ್ರವಾರ, 4 ನವೆಂಬರ್ 2022 (18:34 IST)
ಆರ್ಮಿಯ ಉನ್ನತಾಧಿಕಾರಿ ಎಂದು  ಹೇಳಿಕೊಂಡು ಅಡ್ಡಾಡುತ್ತಿದ್ದ ನಕಲಿ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈ ಆರೋಪಿ ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಅಡ್ಡಾಡುತ್ತಿದ್ದ. ಆರ್ಮಿಯಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಹಲವರಿಂದ ಹಣ ಪಡೆದು ಮೋಸ ಮಾಡಿದ್ದಾನೆ. ಈ ವ್ಯಕ್ತಿ 4 ಲಕ್ಷ , 66 ಸಾವಿರ, 35, ಸಾವಿರ ಹೀಗೆ ಒಬ್ಬೊಬ್ಬರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಉದ್ಯೋಗ ನೀಡುವುದಾಗಿ ಹಲವರಿಗೆ ಪಂಗನಾಮ ಹಾಕಿದ್ದಾನೆ. ಈ ಹಿಂದೆ ಆರೋಪಿ ಬೆಳಗಾವಿ ಕಮಾಂಡೋ ಟ್ರೈನಿಂಗ್ ಸ್ಕೂಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಈತ ಮರಾಠಾ ಲೈಟ್ ಇನ್‌ಫೆಂಟ್ರಿ ವಿಭಾಗದಡಿ ಹೆಲ್ಪಿಂಗ್ ಬಾಯ್ ಆಗಿ ಸ್ವೀಪಿಂಗ್ ಮುಂತಾದ ಕೆಲಸ ಮಾಡುತ್ತಿದ್ದ. ಮಾರುತಿ ನಗರದ ಹೇಮಲತಾ ಎಂಬುವರಿಂದ ಹಣ ಪಡೆದು ಮೋಸ ಮಾಡಿದ್ದಾನೆ. ಹೇಮಲತಾ ಆತನ ವಿರುದ್ದ ದೂರು ನೀಡಿದ ಹಿನ್ನೆಲೆ ಕಳೆದ ಒಂದೆರಡು ವಾರಗಳಿಂದ ಈತನ ಮೇಲೆ ನಿಗಾ ಇರಿಸಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ಆರೋಪಿಯ ಬಂಧನ ಮಾಡಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರವಾರ, ಗೋವಾ ಸೇರಿ ಹಲವರಿಗೆ ಮೋಸ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments