Webdunia - Bharat's app for daily news and videos

Install App

ನಕಲಿ ದಾಖಲೆ ದಂಧೆ-ಐವರ ಬಂಧನ

Webdunia
ಶನಿವಾರ, 17 ಸೆಪ್ಟಂಬರ್ 2022 (19:16 IST)
ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಮೈಸೂರು ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಮೈಸೂರಿನ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಲವು ನಿವೇಶನ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದು, ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡ ಕೈವಾಡ ತಿಳಿದು ಬಂದಿದೆ. ಅದರಂತೆ ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಖತರ್ನಾಕ್ ತಂಡ ಮೋಸ ಮಾಡಿದೆ. ನಗರದ ಉದಯಗಿರಿಯಲ್ಲಿ 
ನಿವೇಶನದ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಲಾಗಿದೆ. ನಕಲಿ ದಾಖಲೆ ಸೃಷ್ಟಿಸಲು ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್‌ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ. ನಗರದ ರಾಮಕೃಷ್ಟನಗರದ I ಬ್ಲಾಕ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್‌ಗಳು ಮತ್ತು ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್‌ಗಳು ಸೇರಿವೆ. ಪ್ರಕರಣ ಸಂಬಂಧ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾ, ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಶಹಭಾಜ್ಮ, ಮಲ್ಲಿಕ್, ಭಾಸ್ಕರ್ ಸೇರಿದಂತೆ ಐವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಪೊಲೀಸರ ತೀವ್ರ ವಿಚಾರಣೆಯ ಆರೋಪಿಗಳು ಈ ಹಿಂದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನೇಕ ನಿವೇಶನಗಳನ್ನು ಮಾರಾಟ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments