Webdunia - Bharat's app for daily news and videos

Install App

ನಕಲಿ ಪರ್ತಕರ್ತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿತ

Webdunia
ಶುಕ್ರವಾರ, 30 ಸೆಪ್ಟಂಬರ್ 2016 (18:34 IST)
ಪತ್ರಕರ್ತನ ಸೋಗಿನಲ್ಲಿ ಸುತ್ತುತ್ತಿದ್ದ ನಕಲಿ ಪತ್ರಕರ್ತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ.
 
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗೋವಿಂದಗಿರಿ ತಾಂಡಾದ ನಿವಾಸಿ ವಿಜಯ್ ಕುಮಾರ್ ಎಂಬಾತ ಟಿವಿ9 ಖಾಸಗಿ ಸುದ್ದಿ ವಾಹಿನಿಯ ಐಡಿ ಕಾರ್ಡ್ ಹಾಗೂ ಬಸ್ ಪಾಸ್ ಮಾಡಿಸಿಕೊಂಡಿದ್ದ. ಈ ಕುರಿತು ಗ್ರಾಫಿಕ್ಸ್ ಸೆಂಟರ್ ಮಾಲೀಕರು ಬಳ್ಳಾರಿ ಟಿವಿ9 ವರದಿಗಾರರಿಗೆ ವಿಷಯ ಮುಟ್ಟಿಸಿದ್ದರು. ಸ್ಥಳಕ್ಕೆ ಆಗಮಿಸಿದ ಟಿವಿ9 ತಂಡ ಕಂಡು ನಕಲಿ ಪರ್ತಕರ್ತ ವಿಜಯ್ ಕುಮಾರ್ ಪರಾರಿಯಾಗಲು ಯತ್ನಿಸಿದ್ದಾನೆ.
 
ಕೈಯಲ್ಲಿ ಕತ್ತರಿ ಹಿಡಿದುಕೊಂಡು ತನ್ನ ಹಿಡಿಯಲು ಬಂದವರನ್ನು ಬೆದರಿಸಲು ಮುಂದಾಗಿದ್ದಾನೆ. ಈ ವೇಳೆ ಸ್ಥಳೀಯರು ಹಾಗೂ ಪೊಲೀಸ್ ಪೇದೆಯ ಸಹಾಯದಿಂದ ಆರೋಪಿಯನ್ನು ಹಿಡಿದು ಸಾರ್ವಜನಿಕರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವರದಿಯಾಗಿದೆ.
 
ಆರೋಪಿ ವಿಜಯ್ ಕುಮಾರ್‌ನನ್ನು ವಶಕ್ಕೆ ಪಡೆದ ಬ್ರೂಸ್ ಪೇಟೆ ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments