Webdunia - Bharat's app for daily news and videos

Install App

ನಕಲಿ ಲೋಕಾಯುಕ್ತ ಅರೆಸ್ಟ್

Webdunia
ಶನಿವಾರ, 1 ಅಕ್ಟೋಬರ್ 2022 (16:09 IST)
ಕಚೇರಿಯಲ್ಲಿ ಪರಿಶೀಲಿಸಲು ಹಲವು ದಾಖಲೆಗಳನ್ನು ಕೇಳಿ, ತಹಸೀಲ್ದಾರ್ ಸೇರಿದಂತೆ ಸಿಬ್ಬಂದಿಯನ್ನು ಯಾಮಾರಿಸಿದ್ದ ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಹಾಸನದ ಸಿವಿಲ್ ಗುತ್ತಿಗೆ ಎಚ್.ಟಿ.ಜ್ಞಾನೇಶ್ (52 ವರ್ಷ) ಬಂಧಿತ.
ಸೊಪ್ಪಹಳ್ಳಿಯ ಸರ್ವೆ ನಂಬರ್ 113 ರಲ್ಲಿನ 12.31 ಎಕರೆ ಪಿತ್ರಾರ್ಜಿತ ಜಮೀನಿನ ದಾಖಲೆಗಳನ್ನು ಸಂಗ್ರಹಿಸುವ ಉದ್ದೇಶದಿಂದ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಯಾಗಿ ಹೋಗಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಈತನ ಜತೆಗೆ ಸಹಾಯಕರಾಗಿ ನಾಟಕವಾಡಿದ್ದ ರಾಜೇಶ್ ಮತ್ತು ದೃಶ್ಯಂತ್ ಬಂಧನಕ್ಕೆ ಬಲೆ ಬೀಸಲಾಗಿದೆ.
 
ಡಿವೈಎಸ್ಪಿ ವಿ.ಕೆ.ವಾಸುದೇವ್ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ರಾಜು, ಪಿಎಸ್‌ಐಗಳಾದ ಶಿವಣ್ಣ, ಸಂಗಮೇಶ್, ಸಿಬ್ಬಂದಿ ಪೆಂಚಲಪ್ಪ ತಂಡವು ನಕಲಿ ಅಧಿಕಾರಿಯನ್ನು ಬಂಧಿಸಿದೆ. ತಾಲೂಕು ಕಚೇರಿಯಲ್ಲಿನ ಸಿಸಿ ಕ್ಯಾಮೆರಾ ಪರಿಶೀಲಿಸಿ, ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
 
ಕಳೆದ ಸೆ.22 ರಂದು ಹಿರಿಯ ಅಧಿಕಾರಿಯಾಗಿ ಕಾಣುವಂತೆ ಇನ್ ಶರ್ಟ್ ಮಾಡಿಕೊಂಡು ಮತ್ತು ಕೈಯಲ್ಲಿ ಫೈಲ್ ಹಿಡಿದುಕೊಂಡು ಸಹಚರನೊಂದಿಗೆ ಬಂದ ಜ್ಞಾನೇಶ್, ಮೊದಲು ಚಿಕ್ಕಬಳ್ಳಾಪುರ ನೋಂದಣಿ ಕಚೇರಿಯಲ್ಲಿ ತನ್ನ ಹೆಸರು ಪ್ರಣವ್, ಬೆಂಗಳೂರು ಕೇಂದ್ರ ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಕೆಲ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡ ಬಳಿಕ ತಾಲೂಕು ಕಚೇರಿಯಲ್ಲಿ ಸುತ್ತಾಡಿದ್ದು ಶಿರಸ್ತೆದಾರ್‌ರಿಂದ ತಾಲೂಕಿನ ಸೊಪ್ಪಹಳ್ಳಿ ಗ್ರಾಮದ ಸರ್ವೆ ನಂಬರ್ 103ಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ಕೊನೆಗೆ ತಹಸೀಲ್ದಾರ್ ಗಣಪತಿ ಶಾಸ್ತ್ರಿ ಚಲನವಲನಗಳ ಬಗ್ಗೆ ಅನುಮಾನಗೊಂಡು ಗುರುತಿನ ಚೀಟಿ ಕೇಳಿದಾಗ ಕೊಟ್ಟಿಲ್ಲ. ಬೆಂಗಳೂರು ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮೊಬೈಲ್​ನಲ್ಲಿ ಕರೆ ಮಾಡಿ, ಮಾತನಾಡುವುದಾಗಿ ತಿಳಿಸಿದಾಗ ಹಿಂಜರಿದಿದ್ದಾನೆ. ನೀವು ಯಾರು?, ಎಲ್ಲಿ ಕೆಲಸ ಮಾಡುವುದು? ನಿಮ್ಮ ಬಳಿಕ ಐಡಿ ಕಾರ್ಡು ಏಕೆ ಇಲ್ಲ ಎಂಬುದಾಗಿ ಹೇಳುತ್ತಿದ್ದಂತೆ ಪರಾರಿಯಾಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments