ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆದು ಸಿಕ್ಕಿಬಿದ್ದ ಇಂಜಿನಿಯರ್!

Webdunia
ಸೋಮವಾರ, 23 ಆಗಸ್ಟ್ 2021 (20:47 IST)
ಅಂತಾರಾಜ್ಯ ವಿವಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಪಡೆದು ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ (ಸಿಪಿಆರ್‍ಐ)ಗೆ ಸಲ್ಲಿಸಿ ಉದ್ಯೋಗ ಪಡೆದಿದ್ದ ಎಂಜಿನಿಯರ್‍ವೊಬ್ಬ ಸಿಂಧುತ್ವ ಪರೀಕ್ಷೆ ವೇಳೆ ಸಿಕ್ಕಿಬಿದ್ದಿದ್ದಾನೆ. 
ನಕಲಿ ಅಂಕಪಟ್ಟಿ ಸಲ್ಲಿಸಿದ ಆರೋಪದಡಿ ನ್ಯೂ ಬಿಇಎಲ್ ರಸ್ತೆಯ ನಿವಾಸಿಯಾ ಮನೀಶ್ ಸಿಂಗ್ (26) ಎಂಬುವರ ವಿರುದ್ಧ ಎಫ್?ಐಆರ್ ದಾಖಲಾಗಿದೆ.
2018ನೇ ಸಾಲಿನಲ್ಲಿ ಸಿಪಿಆರ್‍ಐ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂಜಿನಿಯರ್ ಹುದ್ದೆಗೆ ಮನೀಶ್ ಸಿಂಗ್ ನೇಮಕಗೊಂಡಿದ್ದರು. ನೇಮಕಾತಿ ವೇಳೆ ಮನೀಶ್ ಸಲ್ಲಿಸಿದ್ದ ಐಐಟಿ ಅಂಕಪಟ್ಟಿ ಸಿಂಧುತ್ವ ಪರಿಶೀಲನೆಗಾಗಿ ಅಸ್ಸಾಂನ ಗುವಾಹಟಿ ಐಐಟಿಗೆ ಕಳುಹಿಸಲಾಗಿತ್ತು. ಅಂಕಪಟ್ಟಿ ಪರಿಶೀಲನೆ ನಡೆಸಿದ ಐಐಟಿ ಅಧಿಕಾರಿಗಳು, ನಕಲಿ ಎಂದು ದೃಢೀಕರಿಸಿದ್ದಾರೆ. ಡಿಜಿಟಲ್ ಬೆರಳಚ್ಚು ಬೇರೊಬ್ಬ ಅಭ್ಯರ್ಥಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ ಎನ್ನಲಾಗಿದೆ.
ಈ ಸಂಬಂಧ ಸಿ.ವಿ.ರಾಮನ್ ನಗರದ ಸಿಪಿಆರ್‍ಐ ಆಡಳಿತಾಧಿಕಾರಿ ಕೆ.ಪ್ರವೀಣ್ ಕುಮಾರ್ ಸದಾಶಿವನಗರ ಪೆÇಲೀಸ್?? ಠಾಣೆಗೆ ದೂರು ನೀಡಿದ್ದು, ಸರಕಾರಿ ನೌಕರಿ ಸಲುವಾಗಿ ನಕಲಿ ಅಂಕಪಟ್ಟಿ ಸಲ್ಲಿಸಿದ ಮನೀಷ್?? ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇದರ ಅನ್ವಯ ಆರೋಪಿ ವಿರುದ್ಧ ಎಫ್?ಐಆರ್ ದಾಖಲಿಸಿ, ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮಗಳು ಕುಡಿಯಲ್ಲ, ಪಾರ್ಟಿ ಮಾಡಲ್ಲ ಎಂದಿದ್ದ ಸಿಯಾ ಗೋಯಲ್ ಪೋಷಕರು: ಆದ್ರೆ ಈ ವಿಡಿಯೋದಲ್ಲಿರೋದೇ ಬೇರೆ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ಮುಂದಿನ ಸುದ್ದಿ
Show comments