Webdunia - Bharat's app for daily news and videos

Install App

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

Sampriya
ಗುರುವಾರ, 21 ಆಗಸ್ಟ್ 2025 (16:14 IST)
Photo Credit X
ಬೆಂಗಳೂರು: ಧರ್ಮಸ್ಥಳದ  ಬಗ್ಗೆ ಎಐ ವಿಡಿಯೋ ಮುಖಾಂತರ ಅಪಪ್ರಚಾರ ಮಾಡಿದ್ದಕ್ಕೆ ಯೂಟ್ಯೂಬರ್‌ ಸಮೀರ್ ಬಂಧನ ಭೀತಿ ಹಿನ್ನೆಲೆ, ಇದೀಗ ಬೆಂಗಳೂರು ನಗರವನ್ನು ತೊರೆದಿರುವುದು ಬೆಳಕಿಗೆ ಬಂದಿದೆ. 

ಕಳೆದ ಎರಡು ದಿನದಿಂದ  ಪೊಲೀಸರು ಹುಡುಕುತ್ತಿದ್ದಾರೆಂದು ತಿಳಿದು ಮೊಬೈಲ್‌ ಅನ್ನು ಬೆಂಗಳೂರಿನ ಮನೆಯಲ್ಲಿ ಬಿಟ್ಟು, ನಾಪತ್ತೆಯಾಗಿದ್ದಾನೆ. 

ನಿನ್ನೆ ಪೊಲೀಸರು ಮೊಬೈಲ್ ಲೋಕೇಶನ್ ಆಧರಿಸಿ ಹುಡುಕಾಟ ನಡೆಸಿದಾಗ ಬೆಂಗಳೂರಿನಲ್ಲಿ ಸುತ್ತಾ ಲೋಕೇಷನ್ ತೋರಿಸಿತ್ತು. ಸಂಜೆ ವೇಳೆ ಜಿಗಿಣಿ ಬಳಿ ಲೋಕೇಶನ್ ತೀರಿಸಿದ್ದರಿಂದ ಅದನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಹೋದಾಗ ಆತ ಮೊಬೈಲ್ ಬಿಟ್ಟು ಮಂಗಳೂರಿನ ಕಡೆ ಪ್ರಯಾಣ ಬೆಳೆಸಿರುವುದಾಗಿ ಆತನ ಮನೆಯವರು ಹೇಳಿದ್ದಾರೆ. 

ಒಟ್ಟಾರೆ ಧರ್ಮಸ್ಥಳ ಪ್ರಕರಣದಲ್ಲಿ ಬಂಧನ ಭೀತಿಯಿರುವುದರಿಂದ ಸಮೀರ್ ಇದೀಗ ಪೊಲೀಸರ ಕಣ್ಣು ತಪ್ಪಿಸಿ ಓಡಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. 

ಇನ್ನೂ ಬಂಧನದ ಸಾಧ್ಯತೆಯಿಂದ 2ದಿನಗಳ ಹಿಂದೆಯೇ ತನ್ನ ವಕೀಲರ ಮುಖಾಂತರ ಸಮೀರ್  ನಿರೀಕ್ಷಾ ಜಾಮೀನು ಅರ್ಜಿಯನ್ನ ಸಲ್ಲಿಸಿದ್ದ. ಅದರ ವಿಚಾರಣೆ ಇನ್ನೇನು ನಡೆದು, ತೀರ್ಪು ಹೊರಬೀಳಲಿದೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments