Webdunia - Bharat's app for daily news and videos

Install App

ಸುಳ್ಳು ಅಫಿಡೆವಿಟ್‌: ಸಚಿವ ಮಹದೇವ್ ಪ್ರಸಾದ್‌ಗೆ ಕೋರ್ಟ್ ಸಮನ್ಸ್

Webdunia
ಶನಿವಾರ, 8 ಅಕ್ಟೋಬರ್ 2016 (12:28 IST)
ಚುನಾವಣೆ ಸಂದರ್ಭದಲ್ಲಿ ಸುಳ್ಳು ಅಫಿಡೆವಿಟ್‌ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಹಕಾರ ಸಚಿವ ಎಚ್‌.ಎಸ್.ಮಹದೇವ್ ಪ್ರಸಾದ್ ಅವರಿಗೆ ಗುಂಡ್ಲುಪೇಟೆ ಜೆಎಂಎಫ್‌ಸಿ ಕೋರ್ಟ್ ಸಮನ್ಸ್ ಜಾರಿಯಾಗಿದೆ. 
 
ವಿಚಾರಣೆಗೆಂದು ಡಿಸೆಂಬರ್ 21 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಸಹಕಾರ ಸಚಿವರಿಗೆ ಸಮನ್ಸ್ ನೀಡಲಾಗಿದೆ.  
 
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಸಚಿವ ಮಹಾದೇವ್ ಪ್ರಸಾದ್ ಅವರು ಚುನಾವಣಾ ಅಯೋಗಕ್ಕೆ ಸಲ್ಲಿಸಿದ್ದ ಅಫಿಡೆವಿಟ್‌ನಲ್ಲಿ ಗುಂಡ್ಲುಪೇಟೆ ತಾಲೂಕಿನ ಅರೆಪುರ ಗ್ರಾಮದಲ್ಲಿ ಹೊಂದಿರುವ 3.22 ಎಕರೆ ಜಮೀನಿನ ವಿವರವನ್ನು ಘೋಷಿಸಿರಲಿಲ್ಲ ಎನ್ನುವ ಆರೋಪವಿದೆ.
 
ಈ ಕುರಿತು ಬಿಜೆಪಿ ನಾಯಕ ಸುರೇಶ್ ಅವರು 2013ರ ಸಾಲಿನ ನವೆಂಬರ್ ತಿಂಗಳಲ್ಲಿ ಪ್ರಕರಣ ದಾಖಲಿಸಿದ್ದರು. 2014 ರಲ್ಲಿ ಸ್ಥಳೀಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದಾಗ ಸಚಿವರು ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.
 
ಇದೀಗ ನ್ಯಾಯಾಲಯ ಎರಡನೆಯ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಸಚಿವ ಮಹಾದೇವ್ ಪ್ರಸಾದ್ ಅವರಿಗೆ ಖುದ್ದು ವಿಚಾರಣೆಗೆ ಹಾಚರಾಗುವಂತೆ ಸೂಚನೆ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments