ಪ್ರಜ್ವಲ್ ರೇವಣ್ಣಗೆ ಈಗ ಕುಟುಂಬಸ್ಥರಿಂದಲೇ ಒತ್ತಡ

Krishnaveni K
ಸೋಮವಾರ, 6 ಮೇ 2024 (09:14 IST)
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇನ್ನೂ ಎಸ್ಐಟಿ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಅವರಿಗೆ ಕುಟುಂಬಸ್ಥರಿಂದಲೇ ಒತ್ತಡವಿದೆ ಎನ್ನಲಾಗಿದೆ.

ಸದ್ಯಕ್ಕೆ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ತಕ್ಷಣವೇ ಎಸ್ಐಟಿ ಮುಂದೆ ಶರಣಾಗಲು ಕುಟುಂಬಸ್ಥರಿಂದಲೇ ಒತ್ತಡ ಬಂದಿದೆ.  ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರಿಂದಾಗಿ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ. ಇದು ದೇವೇಗೌಡರ ಕುಟುಂಬಕ್ಕೇ ಕಳಂಕ ತಂದ ಪ್ರಕರಣವಾಗಿದೆ.

ದುಬೈನಿಂದ ನಿನ್ನೆಯೇ ಪ್ರಜ್ವಲ್ ಬೆಂಗಳೂರಿಗೆ ಬರಬೇಕಾಗಿತ್ತು. ಆದರೆ ಅವರು ಬಂಧನ ಭೀತಿಯಿಂದ ಭಾರತಕ್ಕೆ ಬರದೇ ತಪ್ಪಿಸಿಕೊಂಡಿದ್ದಾರೆ. ಈಗಲೇ ವಿಚಾರಣೆಗೆ ಹಾಜರಾಗದೇ ಇದ್ದರೆ ಪ್ರಕರಣ ಮತ್ತಷ್ಟು ಗಂಭೀರವಾಗಲಿದೆ. ಆಗ ಪ್ರಜ್ವಲ್ ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಹೀಗಾಗಿ ಸದ್ಯಕ್ಕೆ ಅವರಿಗೆ ಆಪ್ತರೇ ಶರಣಾಗುವಂತೆ ಸಲಹೆ ನೀಡುತ್ತಿದ್ದಾರೆ.

ಈ ಮಧ್ಯೆ ಎಸ್ಐಟಿ ಟೀಂ ಜೊತೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ  ಜಿ ಪರಮೇಶ್ವರ್ ಸಭೆ ನಡೆಸಿದ್ದು, ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯಕ್ಕೆ ಪ್ರಜ್ವಲ್ ಪತ್ತೆಗಾಗಿ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ಅವರು ಭಾರತಕ್ಕೆ ಬಂದ ತಕ್ಷಣವೇ ಬಂಧನಕ್ಕೊಳಗಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments