Webdunia - Bharat's app for daily news and videos

Install App

BMRCL ವಿರುದ್ಧ ಕುಟುಂಬಸ್ಥರ ಆಕ್ರೋಶ

Webdunia
ಗುರುವಾರ, 9 ಫೆಬ್ರವರಿ 2023 (16:41 IST)
ಮೆಟ್ರೋ ಪಿಲ್ಲರ್ ಕುಸಿದು ತಾಯಿ‌, ಮಗು ಸಾವನ್ನಪ್ಪಿದ ದುರಂತ ನಡೆದು ತಿಂಗಳು ಕಳೆಯುತ್ತಾ ಬಂದ್ರೂ BMRCL ಕ್ರಮಕೈಗೊಳ್ಳದೆ ಕಳ್ಳಾಟವಾಡುತ್ತಿದೆ. ಘಟನೆ ನಡೆದು ತಿಂಗಳು ಕಳೆದ್ರೂ ಕಂಟ್ರ್ಯಾಕ್ಟರ್ ಮೇಲೆ BMRCL ಇನ್ನೂ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದೆ. BMRCLನ ಈ ನಿರ್ಲಕ್ಷ್ಯದ ವಿರುದ್ಧ ನೊಂದ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸಾವನ್ನಪ್ಪಿದ ಮಗು ಮತ್ತು ತಾಯಿ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿತ್ತು. ಪರಿಹಾರ ಘೋಷಿಸಿ ಇಷ್ಟು ದಿನ ಕಳೆದರೂ ಕುಟುಂಬಸ್ಥರಿಗೆ ಸರ್ಕಾರದ ಪರಿಹಾರ ಹಣ ಕೈ ಸೇರಿಲ್ಲ. ದುರಂತ ಸಂಭವಿಸಿದ ದಿನ ಸಿಎಂ 
ಬಸವರಾಜ ಬೊಮ್ಮಾಯಿಯವರು 10 ಲಕ್ಷ ರೂ ಹಾಗೂ ನಮ್ಮ ಮೆಟ್ರೋ ಸಂಸ್ಥೆ 20 ಲಕ್ಷ ಪರಿಹಾರ ಘೋಷಿಸಿದ್ದರು. ಆದರೆ ಕುಟುಂಬಸ್ಥರು BMRCLನ ಪರಿಹಾರವನ್ನ ತಿರಸ್ಕರಿಸಿದ್ದಾರೆ. ಪರಿಹಾರ ತಿರಸ್ಕರಿಸಿರುವ ಕುಟುಂಬಸ್ಥರು ಮೊದಲು ಕಂಟ್ರ್ಯಾಕ್ಟರ್ ಲೈಸೆನ್ಸ್ ರದ್ದು‌ ಮಾಡುವಂತೆ ಆಗ್ರಹಿಸಿದ್ದಾರೆ. BMRCL ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದೆ. ನಮಗೆ ಪರಿಹಾರ ಬೇಕಾಗಿಲ್ಲ ನಮಗೆ ನ್ಯಾಯ ಬೇಕು ಎಂದು ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments