ಕನ್ನಡಿಗ ಶ್ರೀಕಾಂತ್ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿ

Webdunia
ಬುಧವಾರ, 2 ಮಾರ್ಚ್ 2022 (14:44 IST)
ಕ್ಷಣ ಕ್ಷಣಕ್ಕೂ ಉಕ್ರೇನ್ ಪರಿಸ್ಥಿತಿ ವಿಷಮವಾಗುತ್ತಿದ್ದು, ಬಂಕರ್ ಗಳಲ್ಲಿ ರಕ್ಷಣೆ ಪಡೆದಿರುವ ಕನ್ನಡಿಗರಲ್ಲಿ ಆತಂಕ ಹೆಚ್ಚಾಗು ತ್ತಿದೆ. ಸದ್ಯದ ಉಕ್ರೇನ್ ಚಿತ್ರಣವನ್ನು ಮೃತ ನವೀನ್ ರೂಮ್ ಮೇಟ್, ಬೆಂಗಳೂರು ಮೂಲದ ಶ್ರೀಕಾಂತ್ ತೆರೆದಿಟ್ಟಿದ್ದಾರೆ.
ಗೆಳೆಯ ನವೀನ್ ಸಾವಿನ ಬಳಿಕ ಎಲ್ಲರೂ ಧೈರ್ಯ ಕಳೆದುಕೊಂಡಿದ್ದಾರೆ. ಯುದ್ಧ ಆರಂಭದಲ್ಲಿದ್ದ ಧೈರ್ಯ ಈಗ ಇಲ್ಲದಂತಾಗಿದೆ. ಸಂಚಾರಕ್ಕಿದ್ದ ಎಲ್ಲಾ ಮಾರ್ಗಗಳು ಕ್ಲೋಸ್ ಆಗ್ತಿವೆ. ಪಕ್ಕದಲ್ಲೇ ಸಿಡಿಯುತ್ತಿರುವ ಶೆಲ್ ದಾಳಿಗೆ ಜನರು ತತ್ತರಿಸುತ್ತಿದ್ದಾರೆ. ಅನ್ನ ಆಹಾರಕ್ಕೂ ನರಕಯಾತನೆ ಶುರುವಾಗಿದೆ. ಭಾರತಕ್ಕೆ ಬರುವ ಆಸೆ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ಕುಟುಂಬದವರಿಗೆ ಶ್ರೀಕಾಂತ್ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಶ್ರೀಕಾಂತ್ ರಕ್ಷಣೆಗೆ ಕುಟುಂಬದವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದಷ್ಟು ಬೇಗ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಮರಳಿ ವಾಪಸ್ ಕರೆತರುವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments