ಮಾಲೀಕನ ದೌರ್ಜನ್ಯಕ್ಕೆ ಕುಟುಂಬ ಬೀದಿ ಪಾಲು

Webdunia
ಭಾನುವಾರ, 9 ಸೆಪ್ಟಂಬರ್ 2018 (19:20 IST)
ಕಳೆದ 24 ವರ್ಷಗಳಿಂದ ಒಂದೇ ಮನೆಯಲ್ಲಿ ವಾಸವಾಗಿದ್ದ ಕುಟುಂಬವೊಂದು, ಜಮೀನು ಮಾಲೀಕನ ದೌರ್ಜನ್ಯಕ್ಕೆ ಏಕಾ ಏಕಿ ನಡುರಾತ್ರಿಯಲ್ಲಿ ಬೀದಿಗೆ ಬಂದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಸೊಂಡೆಕೊಪ್ಪ ಗ್ರಾಮದಲ್ಲಿ, ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಗ್ರಾಮಕ್ಕೆ ಕಳೆದ 24 ವರ್ಷದ ಹಿಂದೆ ಲಕ್ಷ್ಮಮ್ಮ ಹಾಗೂ ಕುಟುಂಬ, ಉದ್ಯೋಗ ಅರಸಿ ಇಲ್ಲಿಗೆ ಬಂದು ನೆಲೆಸಿತ್ತು. ಆದ್ರೆ ಕೆಲ ವರ್ಷಗಳ ಹಿಂದೆ ಇವರ ಮನೆಯಿದ್ದ ಜಮೀನಿನ ಮಾಲೀಕ, ಭೂಮಿಯನ್ನು ಪರಭಾರೆ ಮಾಡಿದ್ದಾರೆ. ಹೀಗಾಗಿ ಜಮೀನನ್ನು ಖರೀದಿಸಿದ ಮಾಲೀಕ, ಏಕಾ ಏಕಿ ಪೊಲೀಸರನ್ನ ಬಳಸಿಕೊಂಡು, ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ಯುವತಿಯ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಪೊಲೀಸರ ದೌರ್ಜನ್ಯಕ್ಕೆ ಇಡೀ ಕುಟುಂಬ, ಇದ್ದ ಸೂರನ್ನು ಕಳೆದುಕೊಂಡು ಮಹಿಳೆಯರು ಮಕ್ಕಳೆನ್ನದೆ, ರಾತ್ರಿ ಚಳಿ ಗಾಳಿಯಲ್ಲಿ ಕಾಲ ಕಳೆಯುವಂತಾಗಿದೆ. ಮನೆಯಲ್ಲಿದ್ದ ಸಂಪೂರ್ಣ ಸಾಮಾಗ್ರಿಗಳನ್ನು ಪೊಲೀಸರೇ ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಇನ್ನೂ ಮಾದನಾಯಕನಹಳ್ಳಿ ಪೊಲೀಸರ ಈ ನಡೆ ಮಾನವೀಯತೆ ಮರೆತಂತಿದ್ದು, ಪೊಲೀಸರ ಕ್ರಮಕ್ಕೆ ಕುಟುಂಬ ವರ್ಗದವರು ಹಿಡಿಶಾಪ ಹಾಕಿದ್ದಾರೆ. ಇನ್ನೂ ಜಮೀನು ವಿವಾದ ಇದ್ದ ಕಾರಣ ಮಾದನಾಯಕನಹಳ್ಳಿ ಪೊಲೀಸರು ಮನೆಯರನ್ನ ತೆರವು ಮಾಡಿದ್ದಾರೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments