Webdunia - Bharat's app for daily news and videos

Install App

ವಂಶವೃಕ್ಷ ಗೋಲ್ ಮಾಲ್ ಆಸ್ತಿ ಕಬಳಿಕೆ

Webdunia
ಗುರುವಾರ, 24 ಫೆಬ್ರವರಿ 2022 (16:31 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರಪಾಳ್ಯದಲ್ಲಿ 13 ಸಂಬಂಧಿಗಳನ್ನು ವಂಚಿಸಿ, ವ್ಯಕ್ತಿಯೋರ್ವ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.
 
ದೊಡ್ಡಬಳ್ಳಾಪುರ : ತನ್ನ 13 ಸಂಬಂಧಿಗಳನ್ನು ವಂಚಿಸಿ, ವ್ಯಕ್ತಿಯೋರ್ವ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಂಡಿರುವ ಆರೋಪ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರಪಾಳ್ಯದಲ್ಲಿ ಬೆಳಕಿಗೆ ಬಂದಿದೆ.
ಆಸ್ತಿಯಿಂದ ವಂಚಿತರಾದ ಸಂಬಂಧಿಗಳು ವಂಚಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
7 ಗಂಡು ಮಕ್ಕಳು, 7 ಹೆಣ್ಣು ಮಕ್ಕಳಿಗೆ ಆಸ್ತಿ ಸೇರಬೇಕಿತ್ತು. ಆದರೆ ವಂಶವೃಕ್ಷದಲ್ಲಿ 13 ಜನರನ್ನು ಕೈಬಿಟ್ಟಿರುವ ಆರೋಪ ಕೇಳಿಬಂದಿದೆ. ಬೈರಸಂದ್ರಪಾಳ್ಯದ ಸರ್ವೆ ನಂಬರ್ 100/2ರ 9 ಎಕರೆ ಜಮೀನಿಗೆ ಸಂಬಂಧಿಸಿದಂತೆ ನಕಲಿ ವಂಶವೃಕ್ಷ ಬಳಸಿ ಪವತಿ ಖಾತೆ ಮಾಡಿರುವ ಆರೋಪ ಕೇಳಿಬಂದಿದೆ. ಜಮೀನು 4ನೇ ತಲೆಮಾರಿನ ಪಿತ್ರಾರ್ಜಿತ ಆಸ್ತಿಯಾಗಿದ್ದು, ಇದೇ ಜಮೀನಿನಲ್ಲಿ ಎಲ್ಲರೂ ಕೃಷಿ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಆದರೆ ಇದರಲ್ಲಿನ ಒಬ್ಬ ವ್ಯಕ್ತಿ 13 ಜನರನ್ನ ಹೊರಗಿಟ್ಟು ನಕಲಿ ವಂಶವೃಕ್ಷ ಮಾಡಿಸಿಕೊಂಡು ಉಳಿದವರಿಗೆ ವಂಚಿಸಿದ್ದಾನೆ ಎಂದಿದ್ದಾರೆ ವಂಚನೆಗೆ ಒಳಗಾದವರು.
 
ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ ಆರೋಪ
ಸರ್ವೆ ನಂಬರ್ 100/2ರ ಮೂಲ ವ್ಯಕ್ತಿ ವಸಂತಪ್ಪ. ವಸಂತಪ್ಪನಿಗೆ ಪಾಪಿಗ, ಬೈಲಮ್ಮ, ಕೆಂಪಮ್ಮ, ಕಾವಲಪ್ಪ ಎಂಬ 4 ಮಕ್ಕಳು. ಪಾಪಿಗನಿಗೆ ಮದುವೆಯಾಗಿದ್ದು, ಮಕ್ಕಳಿರಲಿಲ್ಲ. ಕೆಂಪಮ್ಮ ಅವರಿಗೂ ಮದುವೆಯಾಗಿತ್ತು ಮಕ್ಕಳಿರಲಿಲ್ಲ. ಕಾವಲಪ್ಪನಿಗೆ ಮದುವೆಯಾಗಿರಲಿಲ್ಲ. ಬೈಲಮ್ಮ ಅವರಿಗೆ ಮದುವೆಯಾಗಿ ತಿಮ್ಮರಾಯಪ್ಪ ಮತ್ತು ವೆಂಕಟೇಶಪ್ಪ ಎಂಬ ಇಬ್ಬರು ಮಕ್ಕಳಿದ್ದರು. ವೆಂಕಟೇಶಪ್ಪನಿಗೆ 7 ಗಂಡು ಮತ್ತು 7 ಹೆಣ್ಣು ಮಕ್ಕಳಿದ್ದರು. ಈಗ ಈ 14 ಮಕ್ಕಳು ಪಿತ್ರಾರ್ಜಿತ ಆಸ್ತಿಯ ವಾರಸ್ಥಾರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments