Webdunia - Bharat's app for daily news and videos

Install App

ಭವಾನಿ ಅಕ್ಕಗೆ ಟಿಕೆಟ್​ ನೀಡಿ ಎಂದ ಅಭಿಮಾನಿ

Webdunia
ಮಂಗಳವಾರ, 4 ಏಪ್ರಿಲ್ 2023 (14:30 IST)
ಹಾಸನದಲ್ಲಿ JDS ಟಿಕೆಟ್ ಕದನ ಜೋರಾಗಿದೆ ಭವಾನಿ ರೇವಣ್ಣಗೆ ಟಿಕೆಟ್​​ ನೀಡುವಂತೆ ಬೆಂಬಲಿಗರು ಒತ್ತಾಯ ಮಾಡಿದ್ದಾರೆ. ಭವಾನಿ ರೇವಣ್ಣ ಅಭಿಮಾನಿ, ಮಹಿಳಾ ಕಾರ್ಯಕರ್ತೆ ಚೈತ್ರಾ ವಿಡಿಯೋ ಮಾಡಿ ಭವಾನಿಗೆ ಟಿಕೆಟ್​ ನೀಡುವಂತೆ ಒತ್ತಾಯಿಸಿದ್ದಾರೆ. ಹಾಸನದ ಶಾಸಕರು ರೇವಣ್ಣ ಕುಟುಂಬಕ್ಕೆ ಪಂಥಾಹ್ವಾನ ನೀಡಿದ್ದಾರೆ.. ಶಾಸಕ ಪ್ರೀತಂ ಗೌಡ ಮಣಿಸಲು ಭವಾನಿ ಅಕ್ಕನಿಗೆ ಟಿಕೆಟ್ ಕೊಡಬೇಕು ಎಂದು ಮಹಿಳಾ ಕಾರ್ಯಕರ್ತೆ ಮಾಜಿ ಸಿಎಂ H.D. ಕುಮಾರಸ್ವಾಮಿಗೆ ಕೈ ಮುಗಿದು ಬೇಡಿಕೊಂಡಿದ್ದಾರೆ. ಹಾಸನ ಟಿಕೆಟ್ ಫೈಟ್ ಕ್ಲೈಮ್ಯಾಕ್ಸ್ ತಲುಪಿದ ಹಿನ್ನೆಲೆಯಲ್ಲಿ ಭವಾನಿಗೆ ಟಿಕೆಟ್ ನೀಡುವಂತೆ ಒತ್ತಡ ಹೆಚ್ಚಾಗಿದೆ. ಸ್ವರೂಪ್ ಅವರ ಕುಟುಂಬಕ್ಕೆ ಆರು ಬಾರಿ ಟಿಕೆಟ್ ನೀಡಲಾಗಿದೆ. ಸ್ವರೂಪ್ ತಂದೆ H.S. ಪ್ರಕಾಶ್ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಎರಡು ವರ್ಷಗಳಿಂದ ಭವಾನಿ ಹಾಸನ ಕ್ಷೇತ್ರದ ಕಾರ್ಯಕರ್ತರ ನೋವಿಗೆ ಸ್ಪಂದಿಸಿದ್ದಾರೆ... ಸತತವಾಗಿ ಕಾರ್ಯಕರ್ತರ ಸಂಪರ್ಕದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಹಾಗಾಗಿ ಇದೊಂದು ಬಾರಿ ಭವಾನಿ ರೇವಣ್ಣಗೆ ಅವಕಾಶ ನೀಡಿ ಎಂದು JDS ಕಾರ್ಯಕರ್ತೆ ಚೈತ್ರಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments