Select Your Language

Notifications

webdunia
webdunia
webdunia
webdunia

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ
ಬೀದರ್ , ಭಾನುವಾರ, 6 ನವೆಂಬರ್ 2022 (17:37 IST)
ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್​​​​ ಜಿಲ್ಲೆಯ ಹುಮನಾಬಾದ್​​​​​ ತಾಲ್ಲೂಕಿನ ಬೋತಗಿ ಗ್ರಾಮದಲ್ಲಿ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೋತಗಿ ಗ್ರಾಮದ ಸಂದೀಪ್​​​​​ ರೆಡ್ಡಿ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.
ರೈತ PKPS ಬ್ಯಾಂಕ್ ಸೇರಿದಂತೆ ಖಾಸಗಿ ಸಾಲ ಸೇರಿ ಒಟ್ಟು 9.50ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಹುಮನಾಬಾದ್​​​​​​​​​​​​​​​​​​​​ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅತೀ ವೇಗವೇ ಸಾವಿಗೆ ಕಾರಣವಾಯ್ತಾ?