Webdunia - Bharat's app for daily news and videos

Install App

ಅಂತ್ಯಕ್ರಿಯೆಗೆ ಎಚ್ ಡಿ ಕುಮಾರಸ್ವಾಮಿ ಬರುವಂತೆ ಡೆತ್ ನೋಟ್ ಬರೆದ ರೈತ!

Webdunia
ಗುರುವಾರ, 6 ಏಪ್ರಿಲ್ 2017 (12:44 IST)
ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಾವಿಗೆ ಕಾರಣವೇನೆಂದು ಡೆತ್ ನೋಟ್ ಬರೆದಿಟ್ಟು ಸಾಯುವುದು ಸಹಜ. ಇಲ್ಲೊಬ್ಬ ರೈತ ತಾನು ಸತ್ತ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅಂತಿಮ ದರ್ಶನ ಪಡೆಯಬೇಕೆಂದು ಬರೆದಿಟ್ಟು ತೀರಿಕೊಂಡಿದ್ದಾನೆ.

 

ಮಂಡ್ಯದ ಬಿ. ಹೊಸೂರಿನಲ್ಲಿ ಈ ಘಟನೆ ನಡೆದಿದೆ. ಆರು ಎಕರೆ ಜಮೀನು ಹೊಂದಿದ್ದ ರೈತ ಶಿವಣ್ಣ ತನ್ನ ಹೊಲದಲ್ಲಿ ಹಲವು ಬೆಳೆ ಬೆಳೆಯುತ್ತಿದ್ದ. ಆದರೆ ಭೀಕರ ಬರಗಾಲದಿಂದಾಗಿ ಸುಮಾರು 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ. ಇದನ್ನು ತೀರಿಸಲಾಗದೆ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 
ಡೆತ್ ನೋಟ್ ನಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ನಮಸ್ಕಾರ ತಿಳಿಸಿದ ಶಿವಣ್ಣ, ತಾನು ಸತ್ತ ಮೇಲೆ ಕುಮಾರಸ್ವಾಮಿ ನನ್ನನ್ನು ನೋಡಲು ಬರಬೇಕು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಬರೆದಿದ್ದಾನೆ. ಇದೀಗ ಮೃತ ರೈತನ ಅಂತಿಮ ಆಸೆ ಪೂರೈಸಲು ಕುಮಾರಸ್ವಾಮಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments