Webdunia - Bharat's app for daily news and videos

Install App

ಮೆಟ್ರೋ ಬಳಿಕ, ಮಾಲ್ ನಲ್ಲಿ ಪಂಚೆ ಉಟ್ಟು ಬಂದ ರೈತನಿಗೆ ಅವಮಾನ (Video)

Krishnaveni K
ಬುಧವಾರ, 17 ಜುಲೈ 2024 (09:50 IST)
Photo Credit: X
ಬೆಂಗಳೂರು: ಕೆಲವು ಸಮಯದ ಹಿಂದೆ ರೈತನೊಬ್ಬನನ್ನು ನಮ್ಮ ಮೆಟ್ರೊ ಸಿಬ್ಬಂದಿ ಒಳಗೆ ಬಿಡದೇ ಅವಮಾನಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಬೆಂಗಳೂರಿನ ಮಾಲ್ ಒಂದರಲ್ಲಿ ಅಂತಹದ್ದೇ ಘಟನೆ ನಡೆದಿದೆ.

ನಮ್ಮ ಮೆಟ್ರೋದಲ್ಲಿ ಸಾದಾ ಡ್ರೆಸ್ ನಲ್ಲಿ ಬಂದಿದ್ದ ರೈತನನ್ನು ಒಳಗೆ ಬಿಡದೇ ಅವಮಾನಿಸಿದ ಘಟನೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನ ಪ್ರತಿಷ್ಠಿತ ಮಾಲ್ ನಲ್ಲೂ ಪಂಚೆ ಉಟ್ಟುಕೊಂಡು ಬಂದಿದ್ದಾರೆಂಬ ಕಾರಣಕ್ಕೆ ರೈತರೊಬ್ಬರನ್ನು ಒಳಗೆ ಬಿಡದೇ ಅವಮಾನಿಸಲಾಗಿದೆ.

ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಈ ಘಟನೆ ನಡೆದಿದೆ. ಹಾವೇರಿ ಮೂಲದ ನಾಗರಾಜ್ ಎಂಬ ರೈತ ಕಚ್ಚೆ ಪಂಚೆ, ಸಾಧಾರಣ ಶರ್ಟ್ ಮತ್ತು ತಲೆ ಮೇಲೊಂದು ಪೇಟ ಸುತ್ತಿಕೊಂಡು ತಮ್ಮ ಮಗನ ಜೊತೆ ಸಿನಿಮಾ ನೋಡಲು ಮಾಲ್ ಗೆ ಬಂದಿದ್ದರು. ಆದರೆ ಅವರ ವೇಷಭೂಷಣ ನೋಡಿ ಮಾಲ್ ನ ಸಿಬ್ಬಂದಿ ಒಳಗೆ ಬಿಡಲಿಲ್ಲ. ಪಂಚೆ ಕಟ್ಟಿಕೊಂಡು ಬಂದವರಿಗೆ ಮಾಲ್ ಒಳಗೆ ಬಿಡಲ್ಲ. ನಮ್ಮ ಮಾಲ್ ನಲ್ಲಿ ಅಂತಹದ್ದೊಂದು ರೂಲ್ಸ್ ಇದೆ ಎಂದ ಸಿಬ್ಬಂದಿಗಳು ಹೊರಗೆ ಅರ್ಧಗಂಟೆ ಕೂರಿಸಿ ಅವಮಾನ ಮಾಡಿದ್ದಾರೆ ಎಂದು ಅವರ ಪುತ್ರ ಆರೋಪಿಸಿದ್ದಾನೆ.

ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಘಟನೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲಿದ್ದವರು ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಮಾಲ್ ಸಿಬ್ಬಂದಿ ಬಳಿಕ ವಿವಾದವಾಗಬಹುದೆಂದು ಆತನನ್ನು ಒಳಗೆ ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments