Webdunia - Bharat's app for daily news and videos

Install App

ಕಾಡಾನೆ ದಾಳಿಗೆ ರೈತ ಬಲಿ

Webdunia
ಗುರುವಾರ, 3 ಫೆಬ್ರವರಿ 2022 (21:34 IST)
ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ನಡೆದಿದೆ. ಕೊಳವಿಗೆ ಗ್ರಾಮದ ರೈತ ರಾಜೇಶ್(50) ಮೃತಪಟ್ಟ ರೈತ.
ಈತ ತನ್ನ ಮನೆ ಹಿತ್ತಲಿನಲ್ಲಿ ದನಗಳಿಗೆ ಹುಲ್ಲು ತರಲು ತೆರಳಿದ್ದಾಗ ಪಕ್ಕದ ಜಮೀನಿನಲ್ಲಿ ವೀರನಹೊಸಹಳ್ಳಿ ಅರಣ್ಯ ವಲಯದಿಂದ ಬಂದು ನಿಂತಿದ್ದ ಒಂಟಿ ಸಲಗ ಹಿಂದೆಯಿಂದ ಬಂದು ಏಕಾಏಕಿ ದಾಳಿ ನಡೆಸಿ, ಕೊಂದು ಹಾಕಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುವ ಭರವಸೆ ನೀಡಿದರು.
ಮನೆಯನ್ನು ಜಖಂಗೊಳಿಸಿದ ಒಂಟಿ ಸಲಗ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ವ್ಯಾಪ್ತಿಯ ಕಾಡಂಚಿನ ಗ್ರಾಮ ನಾಗಪುರ ಹಾಡಿಯಲ್ಲಿ ಒಂಟಿ ಸಲಗವೊಂದು ರಾಜು ಎಂಬುವವರ ಮನೆಯ ಮುಂಭಾಗವನ್ನು ಜಖಂಗೊಳಿಸಿದೆ. ಕಾಡಿನಿಂದ ಬಂದಿದ್ದ ಈ ಒಂಟಿ ಸಲಗೆ ಮನೆ ಮೇಲೆ ದಾಳಿ ನಡೆಸಿತು. ಇದರಿಂದಾಗಿ ಮನೆಯೊಳಗೆ ಇದ್ದ ಕುಟುಂಬ ಜೀವ ಭಯದಿಂದ ಕೂಗಾಡಿದರು. ಅಲ್ಲಿಂದ ತೆರಳಿದ ಒಂಟಿ ಸಲಗ ಜಮೀನಿನಲ್ಲಿ ಬೆಳೆದ ಫಲಸನ್ನು ಸಹ ನಾಶ ಮಾಡಿದೆ. ಕಾಡಂಚಿನ ಗ್ರಾಮಗಳಿಗೆ ಕಾಡು ಪ್ರಾಣಿಗಳು ಬರದಂತೆ ಗೇಟ್ ಅಳವಡಿಸಿದ್ದರೂ, ಅವುಗಳ ನಿರ್ವಹಣೆ ಸರಿಯಾಗಿ ಮಾಡದೇ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments