Webdunia - Bharat's app for daily news and videos

Install App

ಸಿದ್ದರಾಮಯ್ಯ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾಯ್ತು.. ಮೋದಿ ವಾಣಿಜ್ಯ ಬ್ಯಾಂಕ್`ಗಳ ಸಾಲಮನ್ನಾ ಮಾಡ್ತಾರಾ..?

Webdunia
ಬುಧವಾರ, 21 ಜೂನ್ 2017 (16:23 IST)
ಸಿಎಂ ಸಿದ್ದರಾಮಯ್ಯ ಕೊನೆಗೂ ರೈತರ ಸಂಕಷ್ಟಕ್ಕೆ  50,000 ರೂ. ವರೆಗಿನ ಸಹಕಾರಿ ಬ್ಯಾಂಕ್`ಗಳಲ್ಲಿ ರೈತರು ಮಾಡಿರುವ ಸಾಲಮನ್ನಾ ಮಾಡಿ ವಿಧಾನಸಭೆಯಲ್ಲಿ ಆದೇಶಿಸಿದ್ದಾರೆ. 22 ಲಕ್ಷಕ್ಕೂ ಅಧಿಕ ಜನರಿಗೆ ಇದರಿಂದ ಅನುಕೂಲವಾಗಲಿದೆ. ಇದೀಗ, ಸಾಲಮನ್ನಾದ ಚೆಂಡು ನೇರ ಪ್ರಧಾನಮಂತ್ರಿ ಅಂಗಳಕ್ಕೆ ತಲುಪಿದೆ.

ಹೌದು, ಕೇಂದ್ರ ಸರ್ಕಾರ ಸಾಲಮನ್ನಾ ನೆರವು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಕೇಳಿದಾಗಲೆಲ್ಲ ಮೊದಲು ಸಹಕಾರಿ ಬ್ಯಾಂಕ್ ಸಾಲಮಾಡಿ ಬಳಿಕ ಕೇಂದ್ರ ಸರ್ಕಾರವನ್ನ ಕೇಳಿ ಎಂದು ವಿಪಕ್ಷ ಬಿಜೆಪಿ ಮುಖಂಡರು ಹೇಳುತ್ತಿದ್ದರು. ಈಗ ರಾಜ್ಯಸರ್ಕಾರ ಸಹಕಾರಿ ಬ್ಯಾಂಕ್`ಗಳ 8165 ಕೋಟಿ ರೂ. ಸಾಲ ಮನ್ನಾ ಮಾಡಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರ ವಾಣಿಜ್ಯ ಬ್ಯಾಂಕ್`ಗಳಲ್ಲಿರುವ 42,000 ಕೋಟಿ ರೂ. ಸಾಲಮನ್ನಾ ಮಾಡಬೇಕೆಂಬ ಕೂಗಿ ಕೇಳಿಬರುತ್ತಿದೆ.

ಸಾಲಮನ್ನಾ ಮಾಡಿದ ಕೂಡಲೇ ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಸದಸ್ಯರು ಬಿಜೆಪಿ ಸದಸ್ಯರ ಮುಂದೆ ಹಕ್ಕೊತ್ತಾಯ ಮಾಡಿದ್ದು, ವಾಣಿಜ್ಯ ಬ್ಯಾಂಕ್`ಗಳ ಸಾಲ ಮನ್ನಾ ಮಾಡಿಸಿ ಎಂದು ಒತ್ತಾಯಿಸಿದ್ದಾರೆ. ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಕೆ.ಎಸ್. ಪುಟ್ಟಣ್ಣಯ್ಯ ಸಹ ರಾಜ್ಯದ ಬಿಜೆಪಿ ಮುಖಂಡರು ಕೇಂದ್ರದ ಮೇಲೆ ಒತ್ತಡ ತಂದು ವಾಣಿಜ್ಯ ಬ್ಯಾಂಕ್`ಗಳ ಸಾಲಮನ್ನಾ ಮಾಡಿಸಬೇಕೆಂದು ಆಗ್ರಹಿಸಿದ್ದಾರೆ. ವಾಣಿಜ್ಯ ಬ್ಯಾಂಕ್`ಗಳ ಸಾಲಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಹ ಮೋದಿಗೆ ಟ್ವಿಟ್ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments