Webdunia - Bharat's app for daily news and videos

Install App

ರೈತರ ಆತ್ಮಹತ್ಯೆ: ಅರಿವು ಮೂಡಿಸಲು ಫಿಲ್ಮ್ ಛೇಂಬರ್‌ನಿಂದ ಸಾಕ್ಷ್ಯಚಿತ್ರ

Webdunia
ಮಂಗಳವಾರ, 7 ಜುಲೈ 2015 (16:50 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಚಲನಚಿತ್ರ ವಾಣಿಜ್ಯ ಮಂಡಳಿಯು ಸಾಕ್ಷ್ಯಚಿತ್ರವೊಂದನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ. 
 
ಈ ಬಗ್ಗೆ ಫಿಲ್ಮ್ ಚೇಂಬರ್ ಅಧ್ಯಕ್ಷ ಥಾಮಸ್ ಡಿಸೋಜಾ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅರಿವು ಮೂಡಿಸುವುದು ಅನಿವಾರ್ಯ. ಅನ್ನದಾತನಿಗೆ ನೋವಿರುವುದು ಸತ್ಯ. ಆದರೆ ಆತ್ಮಹತ್ಯೆಯೇ ಪರಿಹಾರವೇ ಎಂಬ ಅಂಶಗಳನ್ನಿಟ್ಟುಕೊಂಡು ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಮಯ್ಯ ಅವರ ಸಲಹೆಯನ್ನು ಪಡೆಯಲಿದ್ದೇವೆ ಎಂದಿದ್ದಾರೆ. 
 
ಇನ್ನು ಈ ಸಾಕ್ಷ್ಯಚಿತ್ರವು ಚೇಂಬರ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಭಾಮಾ ಹರೀಶ್ ಅವರ ಸಹಕಾರದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಚಿತ್ರವನ್ನು ಇಬ್ಬರು ಯುವ ನಿರ್ದೇಶಕರು ನಿರ್ದೇಶಿಸಿದ್ದಾರೆ.  ತಾರಾಗಣದಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕಲಾವಿದರೇ ಬಣ್ಣ ಹಚ್ಚಲಿದ್ದಾರೆ ಎಂದು ತಿಳಿದು ಬಂದಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments