Select Your Language

Notifications

webdunia
webdunia
webdunia
webdunia

ರೈತರ ಆತ್ಮಹತ್ಯೆ ಹಿನ್ನೆಲೆ ಜಿಲ್ಲಾ ಪ್ರವಾಸ: ಸಾಂತ್ವನ ವೇಳೆ ಕಣ್ಣೀರಿಟ್ಟ ಕುಮಾರಸ್ವಾಮಿ

ರೈತರ ಆತ್ಮಹತ್ಯೆ ಹಿನ್ನೆಲೆ ಜಿಲ್ಲಾ ಪ್ರವಾಸ: ಸಾಂತ್ವನ ವೇಳೆ ಕಣ್ಣೀರಿಟ್ಟ ಕುಮಾರಸ್ವಾಮಿ
ಮಂಡ್ಯ , ಸೋಮವಾರ, 3 ಆಗಸ್ಟ್ 2015 (13:25 IST)
ರಾಜ್ಯದಲ್ಲಿ ಮುಂದುವರಿದಿರುವ ರೈತರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮೃತ ರೈತರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. 
 
ಜಿಲ್ಲೆಯ ಮಳವಳ್ಳಿ ತಾಲೂಕಿನ ಅಲಗೂರು ಹೋಬಳಿಯ ಕಲ್ಲಕಟ್ಟ ಗ್ರಾಮಕ್ಕೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಉಮೇಶ್(36) ಎಂಬುವವರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ತಮ್ಮ ಪಕ್ಷದ ವತಿಯಿಂದ ಧನ ಸಹಾಯವನ್ನೂ ಮಾಡಿದರು.  
 
ಇದೇ ವೇಳೆ ಮಾತನಾಡಿದ ಅವರು, ನಾನು ಮೊಸಳೆ ಕಣ್ಣೀರನ್ನು ಹಾಕುತ್ತಿಲ್ಲ. ಅವರ ಮನೆಯ ಪರಿಸ್ಥಿತಿಯನ್ನು ನೋಡಿ ಸಹಜವಾಗಿಯೇ ದುಃಖಿತನಾಗಿದ್ದೇನೆ. ಆತ್ಮಹತ್ಯೆಗೆ ಶರಣಾದವರು ರೈತರಲ್ಲದೇ ಹೋದರೂ ಕೂಡ ತಮ್ಮ ಕುಟುಂಬ ನಿರ್ವಹಣೆಗೆ ಸಂಬಂಧಿಸಿದಂತೆ ವೈಯಕ್ತಿಕವಾಗಿ ಸಾಲ ಮಾಡಿಕೊಂಡಿರುತ್ತಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರ್ಕಾರ ಉತ್ತಮ ಆಡಳಿತ ನಡೆಸಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಅಲ್ಲದೆ ಎರಡು ವರ್ಷಗಳ ನಂತರ ಉತ್ತಮ ವಾತಾರಣ ಸೃಷ್ಟಿಯಾಗಲಿದ್ದು, ರೈತರೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ರೈತರಲ್ಲಿ ಮನವಿ ಮಾಡಿದ ಅವರು, ಸರ್ಕಾರವು ರಾಜ್ಯದಲ್ಲಿ ಉತ್ತಮ ಆಡಳಿತ ನೀಡದಿದ್ದಲ್ಲಿ ರಾಜಕೀಯ ನಿವೃತ್ತಿ ಪಡೆಯುವೆ ಎಂದು ರೈತರನ್ನು ನೆನೆದು ಕಣ್ಣೀರಿಟ್ಟರು.

Share this Story:

Follow Webdunia kannada