ರಾಜ್ಯ ರಾಜಕೀಯದ ಡೊಂಬರಾಟಕ್ಕೆ ಕಿಡಿಕಾರಿದ ರೈತರು

Webdunia
ಮಂಗಳವಾರ, 23 ಜುಲೈ 2019 (14:58 IST)
ಬಳ್ಳಾರಿ : ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ದೊಂಬರಾಟವನ್ನು ಕಂಡು ಬಳ್ಳಾರಿಯ ರೈತರು ಕಿಡಿಕಾರಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ರೈತರು, ರಾಜ್ಯದಲ್ಲಿ ಮಳೆ ಇಲ್ಲದೆ, ಬೆಳೆಗೆ ನೀರಿಲ್ಲದೆ, ರೈತರು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇತ್ತ ಕಡೆ ಮೂರು ಪಕ್ಷಗಳು ವಿಧಾನಸೌಧದಲ್ಲಿ ಕಿತ್ತಾಡುತ್ತಾ ಕಾಲಹರಣ ಮಾಡುತ್ತಿವೆ. ರೈತರ ಸಮಸ್ಯೆಗೆ ಒಂದು ದಿನವೂ ಹೀಗೆ ಚರ್ಚೆ ನಡೆಸಲಿಲ್ಲ. ಶಾಸಕರನ್ನು 30-40-50 ಕೋಟಿ ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ. “ನಮ್ಮ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲು ರಾಜಕಾರಣ ಮಾಡೋದಾದರೆ ಯಾಕ್ರಿ ಬರ್ತೀರಾ? ಎಲ್ಲರು ರಾಜಿನಾಮೆ ಕೊಟ್ಟು ಮನೆಗೆ ಹೋಗ್ರಿ?” ಎಂದು ವಾಗ್ದಾಳಿ ನಡೆಸಿದ್ದಾರೆ.

 

ಮೂರು ಪಕ್ಷದವರು ಸೇರಿಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಿದ್ದಾರೆ. ಸದನದಲ್ಲಿ ಮೋಡ ಬಿತ್ತನೆ ಬಗ್ಗೆ ಚರ್ಚೆ ಆಗಬೇಕಿದ್ದ ಸಮಯದಲ್ಲಿ ಹೈಡ್ರಾಮ ಆಡುತ್ತಿದ್ದಾರೆ. ರಾಜಕಾರಣಿಗಳು ಅಕ್ರಮವಾಗಿ ಆಸ್ತಿ ಸಂಪಾದಿಸಿ ಅದರ ರಕ್ಷಣೆಗಾಗಿ ಅವರಿಗೆ ಕುರ್ಚಿ ಅವಶ್ಯಕತೆ ಇದೆ. ಅವರ ಆಟಗಳನ್ನ ಕಾರ್ಟೂನ್ ರೀತಿ ಟಿವಿಯಲ್ಲಿ ನೋಡುವ ರೀತಿ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments