Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ವೆಂಕಯ್ಯನಾಯ್ಡು ವಿರುದ್ಧ ಭುಗಿಲೆದ್ದ ಆಕ್ರೋಶ

ಕೇಂದ್ರ ಸಚಿವ ವೆಂಕಯ್ಯನಾಯ್ಡು ವಿರುದ್ಧ ಭುಗಿಲೆದ್ದ ಆಕ್ರೋಶ
ಮಂಡ್ಯ , ಶುಕ್ರವಾರ, 23 ಜೂನ್ 2017 (13:37 IST)
ರೈತರ ಸಾಲ ಮನ್ನಾ ಮಾಡುವುದು ಫ್ಯಾಶನ್ ಆಗಿ ಹೋಗಿದೆ ಎಂದು ಹೇಳಿಕೆ ನೀಡಿದ ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ಎಂ.ವೆಂಕಯ್ಯನಾಯ್ಡು ವಿರುದ್ಧ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
 
ಶಾಸಕ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನೇಕ ರೈತ ಸಂಘಟನೆಗಳು ಇಂದು ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಿ ಸಚಿವ ನಾಯ್ಡು ವಿರುದ್ಧ ಘೋಷಣೆಗಳನ್ನು ಕೂಗಿದರು. 
 
ಕಳೆದ ನಲವತ್ತು ವರ್ಷಗಳಿಂದ ಎಂದೂ ಬಾರದಂತಹ ಬರ ಬಂದು ರೈತರ ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ಸಚಿವ ನಾಯ್ಡು ಮನಬಂದಂತೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಶಾಸಕ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದರು.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಾಯಕರ ಬೌದ್ದಿಕ ದಿವಾಳಿತನಕ್ಕೆ ಬೇಸತ್ತು ರಾಜೀನಾಮೆ: ಎಚ್.ವಿಶ್ವನಾಥ್