Webdunia - Bharat's app for daily news and videos

Install App

ಸರಕಾರದ ವಿರುದ್ಧ ರೈತ ಸಂಘ ಗರಂ; ಮತ್ತೆ ಹೋರಾಟದ ಹಾದಿಯತ್ತ...

Webdunia
ಶನಿವಾರ, 4 ಮೇ 2019 (17:02 IST)
ಯಾವುದೇ ಸರ್ಕಾರ ಬಂದರೂ ರೈತರ ಸಮಸ್ಯೆ ಕೇಳುತ್ತಿಲ್ಲ. ರೈತರು ಮೊದಲು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. 

ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ರೈತರು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು. ಇಲ್ಲವಾದರೆ ಸರ್ಕಾರಗಳು ರೈತರನ್ನ ಕಡೆಗಣಿಸುತ್ತವೆ. ರಾಜ್ಯ ಸರ್ಕಾರ  ಸರಿಯಾಗಿ ಸಲಾಮನ್ನಾ ಮಾಡಿಲ್ಲ ಎಂದು ದೂರಿದ್ರು.

ರೈತರ ಕಬ್ಬು, ಭತ್ತದ ಹಣವನ್ನ ಬ್ಯಾಂಕುಗಳು ಸಾಲಕ್ಕಾಗಿ  ಜಮಾ ಮಾಡಿಕೊಳ್ಳುತ್ತಿವೆ. ಯಾವುದೇ ಬ್ಯಾಂಕ್ ಗಳು ಸರ್ಕಾರದ ನೀತಿಯನ್ನ ಪಾಲಿಸುತ್ತಿಲ್ಲ. ರೈತರ ಕಬ್ಬಿಗೆ ಎಫ್ ಆರ್ ಪಿ ದರ ಸಿಗುತ್ತಿಲ್ಲ. ರಾಜ್ಯದ ವಿವಿಧ ಕಾರ್ಖಾನೆಗಳಿಂದ 4 ಸಾವಿರ ಕೋಟಿ ರೂ. ಹಣ ರೈತರಿಗೆ ಬರಬೇಕಿದೆ. ಹಣ ಬರದೇ ರೈತರು ಸಂಕಷ್ಟಕ್ಕೆ‌ ಸಿಲುಕಿದ್ದಾರೆ ಎಂದರು.

ಈಗ ಬರಗಾಲ ಬೇರೆ ಬಂದಿದೆ. ಸಹಜವಾಗಿಯೇ ರೈತರು ಮತ್ತಷ್ಟು ಕಷ್ಟಕ್ಕೆ ಒಳಗಾಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಹಣ ಕೊಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments