Select Your Language

Notifications

webdunia
webdunia
webdunia
webdunia

ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ರೈತರ ಸಾಲ ಮನ್ನಾ– ರೇವಣ್ಣ

ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ರೈತರ ಸಾಲ ಮನ್ನಾ– ರೇವಣ್ಣ
ಬೇಲೂರು , ಮಂಗಳವಾರ, 13 ಫೆಬ್ರವರಿ 2018 (15:56 IST)
ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಅರ್ಧ ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
 
ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಬ್ಯಾಂಕಿನವರು ಸಾಲ ಕಟ್ಟುವಂತೆ ಮನೆಗೆ ಬಂದರೂ ಸಾಲವನ್ನು ಕಟ್ಟಬೇಡಿ. ನಾವು ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲ ಸೇರಿದಂತೆ 54 ಸಾವಿರ ಕೋಟಿ ಸಾಲ ಮನ್ನಾ ಮಾಡಲಿದ್ದೇವೆ ಎಂದರು.
 
ರೈತರಿಗೆ ಬೇಕಾದ ಗೊಬ್ಬರು ಹಾಗೂ ಔಷಧಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತದೆ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ ಎತ್ತಿನ ಹೊಳೆ ಯೋಜನೆ ಸ್ಥಗಿತಗೊಳಿಸುತ್ತಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಕುಮಾರಸ್ವಾಮಿ ಅವರು ಹಣ ಲೂಟಿ ಮಾಡುವುದನ್ನು ತಡೆಯುವುದಾಗಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೋಟ್ ಬ್ಯಾನ್ ತೀರ್ಮಾನದ ಹಿಂದೆ ಯಾರಿದ್ದಾರೆಂದು ಹೇಳಿದ ರಾಹುಲ್